ಉಜಿರೆ : ಚಿತ್ತಾವಧಾನ, ಸಮಯಪ್ರಜ್ಞೆ, ಏಕಾಗ್ರತೆ ವರದಿಗಾರನಿಗೆ ಬಹಳ ಅಗತ್ಯವಾದ ಅಂಶಗಳಾಗಿದ್ದು ಭಿನ್ನ ಯೋಚನಾ
ಕ್ರಮದಿಂದಲೇ ಉತ್ತಮ ವರದಿಗಾರನಾಗಬಹುದು ಎಂದು ಝೀ ಕನ್ನಡ ವಾಹಿನಿಯ ಸಿನಿಮಾ ಬರಹಗಾರ ,ಮೂವಿ
ಕಂಟೆಂಟ್ ರೈಟರ್ ಕಿರಣ್ ಚಂದ್ರ ಹೇಳಿದರು.
ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಗೂಗಲ್ ಮೀಟ್ ನ ಮೂಲಕ ಏರ್ಪಡಿಸಿದ್ದ ‘ಸಿನೆಮಾ ವರದಿ’
ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದರು.
ಪ್ರೆಸ್ ಮೀಟ್ಗಳಲ್ಲಿ ಪ್ರಶ್ನೆ ಕೇಳುವ ಸಂದರ್ಭವಹಿಸಬೇಕಾದ ಎಚ್ಚರಿಕೆ ಹಾಗೂ ಪೂರ್ವ ತಯಾರಿಯ ಬಗೆಗೆ ಅವರು
ಮಾಹಿತಿ ನೀಡಿದರು. ಸಿನಿಮಾ ತಂಡ ಅಥವಾ ನಿರ್ದೇಶಕ, ನಿರ್ಮಾಪಕರೊಂದಿಗೆ ಒಳ್ಳೆಯ ಸಂಪರ್ಕವಿತ್ತು ಕೈಗೊಂಡಿರಬೇಕು, ಸಾಮಾಜಿಕ ಜಾಲತಾಣವನ್ನು ಗಮನಿಸುವ ಹಾಗೂ ವಾರ್ತೆಗಳನ್ನು ವೀಕ್ಷಿಸುವ ಮೂಲಕ ಅಪ್ಡೇಟ್ ಆಗಿರಬೇಕು ಎಂದು ಅವರು ತಿಳಿಸಿದರು.
ವಿಭಾಗದ ಪ್ರಾಧ್ಯಾಪಕಿ ಶೃತಿ ಜೈನ್ ಅತಿಥಿಯನ್ನು ಪರಿಚಯಿಸಿ ಸ್ವಾಗತಿಸಿದರು. ವಿದ್ಯಾರ್ಥಿ ಶ್ರವಣ್ ಉಪಾಧ್ಯಾಯ
ವಂದಿಸಿದರು.
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…
ಪಾಕಿಸ್ತಾನದ ಬಳಿ ಪರಮಾಣು ಬಾಂಬ್ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್ ನಾಯಕ ಮಣಿಶಂಕರ್ ಐಯ್ಯರ್ ಹೇಳಿಕೆಗೆ…
2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…
ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…
ಯಾರು ಮೋದಿಗೆ ವೋಟ್ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…