ಮಂಗಳೂರು : ಕರ್ನಾಟಕ ರಾಜ್ಯ ಮಹಾತ್ಮಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಇದರ ವತಿಯಿಂದ ನರೇಗಾ ದಿವಸ್ ಆಚರಣೆ ಫೆ.೨ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದ ಬಳಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮಾನ್ಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಶ್ರೀ. ಡಾ.ಕುಮಾರ್ (ಐಎಎಸ್) ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಯಾಗಿ ದ.ಕ. ಜಿ.ಪಂ ನ ಮಾನ್ಯ ಉಪಕಾರ್ಯದರ್ಶಿಗಳು ಹಾಗೂ ನರೇಗಾ ನೋಡೆಲ್ ಅಧಿಕಾರಿಗಳಾದ ಶ್ರೀ. ಆನಂದ್ ಕುಮಾರ್ ಅವರು ಶುಭಹಾರೈಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯವರಾದ ಶ್ರೀ ನಿಂಗಯ್ಯ, ಪುತ್ತೂರು, ಕಡಬ ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕಾಧಿಕಾರಿ ಶ್ರೀ. ನವೀನ್ ಕುಮಾರ್ ಭಂಡಾರಿ, ಸುಳ್ಯ ತಾಲೂಕು ಪಂಚಾಯತ್ ನಕಾರ್ಯನಿರ್ವಾಹಕಾಧಿಕಾರಿ ಶ್ರೀ ಭವಾನಿ ಶಂಕರ್, ಮಂಗಳೂರು ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕಾಧಿಕಾರಿ ಶ್ರೀ ನಾಗರಾಜ್, ಬೆಳ್ತಂಗಡಿ ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕಾಧಿಕಾರಿ ಶ್ರೀ ಕುಸುಮಾಧರ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಟ್ರಸ್ಟಿಗಳು, ದ.ಕ.ಜಿಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಲಿತಾ ಜಿ., ಉಪಾಧ್ಯಕ್ಷರಾದ ಸವಿತಾ, ಸುಬ್ರಹ್ಮಣ್ಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ವೇದಿಕೆಯಲ್ಲಿ ಉಪಸ್ಥಿತರಿರುವರು.
ಪುತ್ತೂರು ಸಹಾಯಕ ನಿರ್ದೇಶಕರಾದ ಶ್ರೀಮತಿ ಶೈಲಜಾ ಭಟ್, ಕಡಬ ಸಹಾಯಕ ನಿರ್ದೇಶಕರಾದ ಶ್ರೀ ಚೆನ್ನಪ್ಪಗೌಡ, ಬೆಳ್ತಂಗಡಿ ಸಹಾಯಕ ನಿರ್ದೇಶಕರಾದ ಶ್ರೀಮತಿ ಸಫಾನ, ಗ್ರಾಮ ಪಂಚಾಯತ್ ಸದಸ್ಯರು, ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್, ಆಡಳಿತ ಶಾಖೆ ಸಿಬ್ಬಂದಿಗಳು, ನರೇಗಾ ಸಂಘದ ಸದಸ್ಯರು, ಗ್ರಾಮಸ್ಥರು, ಸಂಘ- ಸಂಸ್ಥೆಗಳ ಸದಸ್ಯರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಹಾತ್ಮಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ಇದರ ಡೈರಿ ಹಾಗೂ ಕ್ಯಾಲೆಂಡರ್ ಬಿಡುಗಡೆ, ಗ್ರಾಮ ಪಂಚಾಯತ್ಗೆ ಡಸ್ಟ್ ಬಿನ್ ವಿತರಣೆ, ಹಾಗೂ ಉದ್ಯೋಗ ಖಾತರಿ ಯೋಜನೆಯಡಿ ೧೦೦ ದಿನ ಪೂರೈಸಿದವರಿಗೆ ಹಣ್ಣಿನ ಗಿಡ ನೆಡುವ ಮೂಲಕ ಗೌರವಿಸಲಾಯಿತು. ಹೊಸ ಉದ್ಯೋಗ ಚೀಟಿಗೆ ಬೇಡಿಕೆ ನೀಡಿದವರಿಗೆ ಉದ್ಯೋಗ ಚೀಟಿ ವಿತರಣೆ ಕಾರ್ಯಕ್ರಮವನ್ನು ಗಣ್ಯರು ನೆರೆವೇರಿಸಿದರು.
ಬಳಿಕ ಕುಮಾಧಾರ ಸ್ನಾನಘಟ್ಟದ ಸ್ವಚ್ಛತಾ ಶ್ರಮದಾನ ನಡೆಯಿತು. ಅಪರಾಹ್ನದ ಬಳಿಕ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಯೇನೆಕಲ್ಲು ಗ್ರಾಮಕ್ಕೆ ಭೇಟಿ ನೀಡಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಮಾಹಿತಿ ಕಾರ್ಯಕ್ರಮ ಹಾಗೂ ಮನೆಮನೆ ಭೇಟಿ ನೀಡಿ ಸೋಕ್ ಫಿಟ್ ನಿರ್ಮಾಣದ ಕುರಿತ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು