News Karnataka Kannada
Tuesday, April 30 2024
ಮಂಗಳೂರು

ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ಸ್ವಾಮೀಜಿ ಕಾರಿಂಜ ಕ್ಷೇತ್ರಕ್ಕೆ ಭೇಟಿ

Inauguration of administrative office of Federation of Bunts Associations at Mulki on April 5
Photo Credit :
ಬಂಟ್ವಾಳ : ಇತಿಹಾಸ ಪ್ರಸಿದ್ಧ ಕಾರಿಂಜ ಕ್ಷೇತ್ರದ ಪಾವಿತ್ರ್ಯತೆಯನ್ನು ಉಳಿಸಬೇಕು, ಅಕ್ರಮ ಚಟುವಟಿಕೆ, ಅಕ್ರಮ ಕೋರೆ ನಿಲ್ಲಿಸಬೇಕು ಎಂಬ ಭಕ್ತಾದಿಗಳ ಹಾಗೂ ಹಿಂದೂ ಜಾಗರಣಾ ವೇದಿಕೆ ಕೂಗಿಗೆ ಶ್ರೀ ಕ್ಷೇತ್ರದಲ್ಲಿ ಹಿಂದೂ ಜಾಗರಣಾ ವೇದಿಕೆಯಿಂದ ನಡೆದ ಪೂರ್ವಭಾವಿ ಸಭೆಗೆ ಜಿಲ್ಲೆಯ ಸಾಧು ಸಂತರು ಬೆಂಬಲವಾಗಿ ನಿಂತಿದ್ದಾರೆ.
ಸೋಮವಾರ ಕಾರಿಂಜ ಕ್ಷೇತ್ರಕ್ಕೆ ಭೇಟಿ ನೀಡಿದ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ಸ್ವಾಮೀಜಿ, ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ, ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಪರಮಪೂಜ್ಯ ಓಂ ಶ್ರೀ ವಿದ್ಯಾನಂದ ಸರಸ್ವತಿ ಮಾತಾಶ್ರೀ ಶಿವಜ್ಞಾನ ಮಂದಿರ ಚಿಲಿಂಬಿ, ತಪೋನಧಿ ನಾಗಸಾಧು ವಿಠಲಗಿರಿ ಮಹಾರಾಜರುಗಳು ಕ್ಷೇತ್ರದಲ್ಲಿ ಆದ ತೊಂದರೆಯ ಬಗ್ಗೆ ಪರಿಶೀಲನೆ ನಡೆಸಿದರು.
ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಬ್ರಹ್ಮಣ್ಯ ಸ್ವಾಮೀಜಿ ಮಾತನಾಡಿ ಕ್ಷೇತ್ರ ಸುತ್ತಮುತ್ತಲಿನ ಸ್ಥಳದಲ್ಲಿ ಸ್ಪೋಟಕಗಳನ್ನು ಬಳಸಿ ಗಣಿಗಾರಿಕೆ ಮಾಡಿರುವುದರಿಂದ ಶ್ರೀ ಕ್ಷೇತ್ರಕ್ಕೆ ಅಪಾಯವಾಗಿದೆ. ಶ್ರೀ ಕ್ಷೇತ್ರದ ಸುತ್ತು ಗೋಡೆ, ಅನ್ನದಾನದ ಕಟ್ಟಡ ಬಿರುಕು ಬಿಟ್ಟಿದೆ, ಆರು ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ಮಾಡಬಾರದು, ೧೦ ಕಿ.ಮೀ. ವ್ಯಾಪ್ತಿಯಲ್ಲಿ ಧಾರ್ಮಿಕ ಸೂಕ್ಷ್ಮವಲಯವಾಗಿ ಘೋಷಣೆಯಾಗಬೇಕಾಗಿದೆ ಎಂದು ತಿಳಿಸಿದರು.
ಮಾಣಿಲ ಮೋಹನದಾಸ ಸ್ವಾಮೀಜಿ ಮಾತನಾಡಿ ಶ್ರೀ ಕ್ಷೇತ್ರ ಉಳಿವಿಗಾಗಿ ಮುಂದಿನ ದಿನಗಳಲ್ಲಿ ಸಾಧು ಸಂತರೇ ರಸ್ತೆ ಇಳಿಯುವ ಅನಿವಾರ್ಯತೆ ಬರುವ ಮೊದಲು ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ ದೇವಳದಲ್ಲಿ ಅವ್ಯವಸ್ಥೆಗಳು ನಿರ್ಮಾಣವಾಗಿದೆ. ಇದೊಂದು ಶಿಲೆಯ ಮೇಲೆ ಇರುವ ದೇವಸ್ಥಾನ. ಈ ಪ್ರದೇಶದಲ್ಲಿ ಗಣಿಗಾರಿಕೆ ಸೂಕ್ತವಲ್ಲ. ಜಿಲ್ಲಾಧಿಕಾರಿ ತಕ್ಷಣವೇ ಈ ಗಣಿಗಾರಿಕೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಚಿಲಿಂಬಿಯ ಪರಮಪೂಜ್ಯ ಓಂ ಶ್ರೀ ವಿದ್ಯಾನಂದ ಸರಸ್ವತಿ ಮಾತಾಶ್ರೀ ಶಿವಜ್ಞಾನ ಸ್ವಾಮೀಜಿಯವರು ಮಾತನಾಡಿ ಲೈಸೆನ್ಸ್ ಇಲ್ಲದ ಗಣಿಗಾರಿಕೆ ಕೋರೆಗಳು, ಗೋಮಾಳದ ಸ್ಥಳದಲ್ಲಿ ಗಣಿಗಾರಿಕೆ ಮಾಡುವುದನ್ನು ನಿಲ್ಲಿಸಬೇಕು. ಪುರಾತನ ಕಾಲದ ದೇವಸ್ಥಾನವನ್ನು ಉಳಿಸಬೇಕು. ನಮ್ಮ ಧರ್ಮವನ್ನು ಉಳಿಸಲು ಯಾವ ತ್ಯಾಗಕ್ಕೂ ಸಿದ್ಧ ಎಂದು ಆಗ್ರಹಿಸಿದರು.
ಶ್ರೀ ಕ್ಷೇತ್ರದ ಕಾರ್ಯಕಾರಿ ಸಮಿತಿ ಅಧ್ಯಕ್ಷ  ಚಂದ್ರಶೇಖರ ಶೆಟ್ಟಿ ಮಾತನಾಡಿ, ದೇವಸ್ಥಾನದ ಬುಡದಲ್ಲೇ ಕಲ್ಲು ಒಡೆಯಲು ಬಳಸುವ ಸ್ಪೋಟಕಗಳ ದಾಸ್ತಾನು ಹೊಂದಿದೆ. ಇದು ತುಂಬಾ ಅಪಾಯಕಾರಿ. ಸರಕಾರ ಆದಷ್ಟು ಬೇಗ ಇದರ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿದರು.
ಹಿಂದೂ ಜಾಗರಣಾ ವೇದಿಕೆಯು ಕಲ್ಲಿನ ಕೋರೆ ಸ್ಥಗಿತಗೊಳಿಸಲು ಡಿಸೆಂಬರ್ ೨೦ರ ಗಡುವು ನೀಡಿದ್ದು ಮಂಗಳವಾರ ಮಂಗಳೂರಿನ ಜಿಲ್ಲಾದಿಕಾರಿಗೆ ಮುತ್ತಿಗೆ ಹಾಕುವುದಾಗಿ ಹಿಂದು ಜಾಗರಣ ವೇದಿಕೆಯ ಮುಖಂಡರು ಈ ಸಂದರ್ಭ ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು