ಸುರತ್ಕಲ್ : ವ್ಯಕ್ತಿಯೊಬ್ಬರು 5ನೇ ಮಹಡಿಯಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಸುರತ್ಕಲ್ ಎನ್. ಐ. ಟಿ. ಕೆ. ಅಸಿಸ್ಟೆಂಟ್ ಪ್ರೊಫೆಸರ್ ಮನೀಶ್ ಕುಮಾರ್ ( 37) ಗಾಯಗೊಂಡಿರುವ ವ್ಯಕ್ತಿ ಎಂದು ತಿಳಿದು ಬಂದಿದೆ.
ಕೇಬಲ್ ಆಂಟೆನಾ ಸರಿಪಡಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬುಧವಾರ ಸಂಜೆ ಕಟ್ಟಡದ 5ನೇ ಮಹಡಿಯಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿರುವ ಅವರು,ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.