Categories: ಮಂಗಳೂರು

ಸುಳ್ಯ: ಶೌಚಾಲಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಮೃತ್ಯು

ಸುಳ್ಯ: ಶೌಚಾಲಯದ ಗೋಡೆ ದುರಸ್ತಿ ಮಾಡುತ್ತಿದ್ದ ವೇಳೆ ಗೋಡೆ ಕುಸಿದು ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಎಣ್ಮೂರಿನಲ್ಲಿ ನಡೆದಿದೆ.

ಶೌಚಾಲಯದ ಹಳೆ ಗೋಡೆ ಕೆಡವುತ್ತಿದ್ದ ಸಮಯದಲ್ಲಿ ಮಣ್ಣಿನ ಇಟ್ಟಿಗೆಯ ಗೋಡೆ ಮೈಮೇಲೆ ಕುಸಿದು ಬಿದ್ದು ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

ಎಣ್ಣೂರು ಗ್ರಾಮದ ನರ್ಲಡ್ಕದ ನಿವಾಸಿ ಹರೀಶ ನಾಯ್ಕ್ ಎಂಬವರ ಮನೆಯ ಹಳೆ ಶೌಚಾಲಯದ ಗೋಡೆ ಕೆಡಹುವ ವೇಳೆ ಈ ದುರ್ಘಟನೆ ನಡೆದಿದೆ. ಹಳೆಯ ಟಾಯ್ಲೆಟ್ ಗೋಡೆ ತೆಗೆದು, ಹೊಸ ಕಟ್ಟಡ ಕಟ್ಟುವುದಕ್ಕಾಗಿ ಕೆಲಸ ಮಾಡಲಾಗುತ್ತಿತ್ತು. ಇತರ ಕೆಲಸಗಾರರ ಜತೆ ಸಮೀಪದ ಮನೆಯ ಬೀಪಾತುಮ್ಮ (60) ಹಾಗೂ ನೆಬಿಸಾ (45) ಎಂಬವರು ಕೆಲಸದಲ್ಲಿ ತೊಡಗಿದ್ದರು. ಆ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಇವರ ಮೇಲೆಯೇ ಕುಸಿದು ಬಿದ್ದಿದೆ. ತಕ್ಷಣ ಅಲ್ಲಿದ್ದವರು ಮಣ್ಣಿನ ರಾಶಿಯಿಂದ ಹೊರ ತೆಗೆದು ತೀವ್ರ ಗಾಯಗೊಂಡಿದ್ದ ಇವರಿಬ್ಬರನ್ನು ಆಸ್ಪತ್ರೆಗೆ ಸಾಗಿಸಿದರು.

ಆದರೆ, ಕಾಣಿಯೂರು ತಲುಪುವಾಗ ಬೀಪಾತುಮ್ಮ ಕೊನೆಯುಸಿರೆಳೆದರು.
ನೆಬಿಸಾ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಸ್ಪತ್ರೆ ತಲುಪುವ ವೇಳೆ ಅವರೂ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬೆಳ್ಳಾರೆ ಎಸ್ಐ ಆಂಜನೇಯ ರೆಡ್ಡಿ ಧಾವಿಸಿ, ಮಾಹಿತಿ ಪಡೆದರು. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago