ಬೆಳ್ತಂಗಡಿ: ಮೀನುಗಾರ ಮೊಗೇರರರು ಮತ್ತು ಇತರ ಜಾತಿಗಳು ಸುಳ್ಳು ದಾಖಲೆ ಸೃಷ್ಟಿಸಿ ಪ.ಜಾತಿಯ ಪ್ರಮಾಣಪತ್ರ ಪಡೆದು ಪರಿಶಿಷ್ಟ ಸಂವಿಧಾನಿಕ ಹಕ್ಕನ್ನು ಕಸಿದುಕೊಳ್ಳುತ್ತಿದ್ದು ಇದರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಬೆಳ್ತಂಗಡಿ ತಾಲೂಕು ಮೊಗೇರ ಸಮನ್ವಯ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನಲ್ಲಿ ಪ್ರತಿಭಟನೆ ನಡೆಯಿತು.
ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ. ಅವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಮುಗೇರ ಸಂಘ ಸಂಘಟನಾ ಕಾರ್ಯದರ್ಶಿ ಜಯಪ್ರಕಾಶ್ ಕನ್ಯಾಡಿ, ಬೆಳ್ತಂಗಡಿ ಮುಗೇರ ಸಮನ್ವಯ ಸಮಿತಿ ಅಧ್ಯಕ್ಷ ಎಚ್.ಬಿ.ಮೋಹನ್, ಕಾರ್ಯದರ್ಶಿ ಕೊರಗಪ್ಪ ಅಳದಂಗಡಿ, ಪ್ರಮುಖರಾದ ಸಿ.ಕೆ.ಚಂದ್ರಕಲಾ, ಜಗದೀಶ್ ಕಕ್ಕಿಂಜೆ, ಸುಂದರ್ ಇಂದಬೆಟ್ಟು, ಪ್ರಸಾದ್ ಇತರರು ಉಪಸ್ಥಿತರಿದ್ದರು.