Categories: ಮಂಗಳೂರು

ಸೂರಿಕುಮೇರು ಚರ್ಚ್ ನಲ್ಲಿ ಸಾಂತ್ ಮಾರಿ ಹಬ್ಬ ಆಚರಣೆ

ಬಂಟ್ವಾಳ : ಕೊರೋನಾ ಸಾಂಕ್ರಾಮಿಕ ರೋಗದಿಂದ  ರಕ್ಷಿಸಿದ ದೇವರಿಗೆ ಕೃತಜ್ಞತೆ ಹೇಳುವ ಮೂಲಕ  ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ವ್ಯಾಪ್ತಿಯ ಎಲ್ಲಾ ಕ್ರೈಸ್ತ ಭಕ್ತಾದಿಗಳು  ನವಂಬರ್ 17 ರ ಬುಧವಾರ  ಸಾಂತ್ ಮಾರಿ ಹಬ್ಬವನ್ನು ಆಚರಿಸಿದರು.
ಮೊಗರ್ನಾಡ್ ವಲಯದ ವಿಕಾರ್ ವಾರ ರವರಾದ ಅತೀ ವಂದನೀಯ ಡಾ| ಮಾರ್ಕ್ ಕ್ಯಾಸ್ತೆಲಿನೊ, ಪ್ರಧಾನ ಧರ್ಮಗುರುಗಳಾಗಿ  ದಿವ್ಯ ಬಲಿಪೂಜೆಯನ್ನು ನೆರವೇರಿಸಿ ಆಶೀರ್ವದಿಸಿದರು.
ದೆಲಂತ ಬೆಟ್ಟು ಚರ್ಚ್ ನ ಧರ್ಮಗುರುಗಳಾದ ವಂದನೀಯ ಫಾದರ್ ಸುನಿಲ್ ಪಿಂಟೊರವರು ಪ್ರವಚನ ನೀಡುತ್ತಾ, ಸಾಂತ್ ಮಾರಿ ಹಬ್ಬ ಚರ್ಚ್ ಕುಟುಂಬದ ಹಬ್ಬ. ಸಂತ ಜೋಸೆಫರು ಕುಟುಂಬದಲ್ಲಿ ಮಕ್ಕಳನ್ನು ಪ್ರೀತಿಸಿದ  ಹಾಗೆ ನಾವೂ ಒಬ್ಬರಿಗೊಬ್ಬರು ಮಕ್ಕಳ ಹಾಗೆ ಪ್ರೀತಿಸಬೇಕು.
ಕ್ರೈಸ್ತ ಕುಟುಂಬದಲ್ಲಿ ತಪ್ಪುಗಳು ನಡೆದು, ಭಿನ್ನಾಭಿಪ್ರಾಯಗಳು ಎದುರಾದಾಗ  ಅದನ್ನು ಏಕತಾ ಭಾವದಿಂದ ಸರಿಪಡಿಸಬೇಕೇ ಹೊರತು ಸಾಮಾಜಿಕ‌ ಜಾಲತಾಣಗಳಲ್ಲಿ ಪ್ರಕಟಿಸಿ ಮಾನ ಹರಾಜು ಮಾಡುವುದು ಮಹಾ ಪಾಪ ಎಂದ ಅವರು, ಪರಸ್ಪರ ಕ್ಷಮಿಸಿ ಬಾಳುವುದೇ ನಿಜವಾದ ಸಾಂತ್ ಮಾರಿ ಹಬ್ಬದ ಆಶಯ ಎಂದರು.
ವಲಯದ ಇತರ ಧರ್ಮಗುರುಗಳು ದಿವ್ಯ ಬಲಿಪೂಜೆಯಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಚರ್ಚ್ ಧರ್ಮಗುರುಗಳಾದ ಫಾದರ್ ಗ್ರೆಗರಿ ಪಿರೇರಾರವರ ಜನ್ಮ ದಿನವನ್ನು ಆಚರಿಸಲಾಯಿತು.
Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

5 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago