ಮಂಗಳೂರು : ನಗರದ ಹೊರವಲಯದ ಕೂಳೂರು ಸಮೀಪದ ಪಂಜಿಮೊಗರು ಉರುಂದಾಡಿಗುಡ್ಡೆ ಎಂಬಲ್ಲಿ ಫೆಬ್ರವರಿ ಐದರಂದು ಸೈಂಟ್ ಆ್ಯಂಟನಿ ಹೋಲಿಕ್ರಾಸ್ ಪ್ರಾರ್ಥನಾ ಕೇಂದ್ರವನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿ ಕಾವೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಬಂಧಿತರನ್ನು ಬಜಪೆ ನಿವಾಸಿ ಲತೀಶ್ ಮತ್ತು ಪಂಜಿಮೊಗರುವಿನ ಧನಂಜಯ್ ಎಂದು ಗುರುತಿಸಲಾಗಿದೆ.
ಸುಮಾರು ನಲವತ್ತು ವರ್ಷದ ಹಿಂದೆ ಸ್ಥಾಪಿಸಲಾದ ಈ ಪುರಾತನ ಕೇಂದ್ರವನ್ನು ಜೆಸಿಬಿ ಬಳಸಿ ಕೆಡವಲಾಗಿತ್ತು ಇದರಿಂದ ಆಕ್ರೋಶಗೊಂಡು ಸ್ಥಳೀಯ ಕ್ರೈಸ್ತರು ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕೂಳೂರು ಜಂಕ್ಷನ್ ಬಳಿ ಪ್ರತಿಭಟನೆ ನಡೆಸಿದ್ದರು ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.