News Karnataka Kannada
Monday, May 06 2024
ಮಂಗಳೂರು

ಸೈಕಲ್‌ನಲ್ಲಿ ತೆರಳುತ್ತಿದ್ದ ಬಾಲಕನಿಗೆ ಜೆಸಿಬಿ ವಾಹನ ಡಿಕ್ಕಿ: ಬಾಲಕ ಸ್ಥಳದಲ್ಲೇ ಮೃತ

Woman killed in accident, son Ashwin and husband critically injured
Photo Credit :
ಬಂಟ್ವಾಳ: ಸೈಕಲ್‌ನಲ್ಲಿ ತೆರಳುತ್ತಿದ್ದ ಬಾಲಕನಿಗೆ ಜೆಸಿಬಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕನ್ಯಾನ ಗ್ರಾಮದ ಕಣಿಯೂರು ಸಮೀಪ ನಡೆದಿದೆ.
ಕಣಿಯೂರು ನಿವಾಸಿ ಹಸೈನಾರ್ ಅವರ ಪುತ್ರ ಏಳನೇ ತರಗತಿ ವಿದ್ಯಾರ್ಥಿ ಅಹಮ್ಮದ್ ಅಖಿಲ್(೧೨) ಮೃತಪಟ್ಟ ಬಾಲಕ.
ಕನ್ಯಾನದ ಕಣಿಯೂರು ಎಂಬಲ್ಲಿಯ ಉದ್ಯಮಿಯ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ ಜೆಸಿಬಿ ರಸ್ತೆ ಬದಿಯಲ್ಲಿ ಸೈಕಲ್ ನಲ್ಲಿ ತೆರಳುತ್ತಿದ್ದ ಬಾಲಕನ ಮೇಲೆ ಡಿಕ್ಕಿ ಹೊಡೆದಿದೆ.
ಮೊದಲೇ ನಶೆಯಲ್ಲಿದ್ದ ಗದಗ ಮೂಲದ ಚಾಲಕ ಬಾಷಾ ತನ್ನ ನಿರ್ಲಕ್ಷ್ಯದ ಚಲಾವಣೆಯಿಂದ ಜೆಸಿಬಿ ಬಾಲಕನ ಮೇಲೆ ಎರಗಿದೆ ಎನ್ನಲಾಗಿದೆ.  ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕನನ್ನು ಜೆಸಿಬಿ ಕೊಕ್ಕಿನಿಂದ ಪಕ್ಕಕ್ಕೆ ಸರಿಸಿ ತಾನೂ ಮಾಡಬೇಕಾದ ಕೆಲಸದ ಜಾಗಕ್ಕೆ ಹೋಗಿದ್ದಾನೆನ್ನಲಾಗಿದೆ.  ಬಳಿಕ  ಬೇರೊಬ್ಬ ಚಾಲಕ  ಬರುತ್ತಾನೆಂದು ಹೇಳಿ ಅಲ್ಲಿಂದ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮಾಹಿತಿ ಪಡೆದ ಸ್ಥಳೀಯರು ಚಾಲಕನಿಗೆ ಗೆ ಹಿಗ್ಗಾಮುಗ್ಗಾ ಥಳಿಸಿ, ಬಳಿಕ ವಿಟ್ಲ ಪೊಲೀಸರ ವಶಕ್ಕೆ ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು