Categories: ಮಂಗಳೂರು

ಸೋಮವಾರ ಸುರಿದ ಮಳೆಗೆ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ನೀರು

ಬೆಳ್ತಂಗಡಿ : ತಾಲೂಕಿನ ಹೆಚ್ಚಿನ ಪ್ರದೇಶಗಳಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಭಾರಿ ಮಳೆ ಸುರಿದಿದ್ದು ಹಲವೆಡೆ ತೋಟ ಗದ್ದೆಗಳಿಗೆ ನೀರುನುಗ್ಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ನೀರು ನುಗ್ಗಿದೆ.
ಮುಂಡಾಜೆ,ಕಲ್ಮಂಜ, ಕಡಿರುದ್ಯಾವರ, ಮಲವಂತಿಗೆ,ದಿಡುಪೆ, ತೋಟತ್ತಾಡಿ ಪರಿಸರಗಳಲ್ಲಿ ಭಾರಿ ಮಳೆ ಸುರಿದಿದೆ. ಕಡಿರುದ್ಯಾವರ ಗ್ರಾಮದ ಎರ್ಮಾಲ್ ಫಲ್ಕೆಯ ಬೈಲು ಹಳ್ಳದಲ್ಲಿ ಭಾರಿ ಪ್ರಮಾಣದ ನೀರು ಹರಿದು ಸಮೀಪದ ಕೃಷಿ ತೋಟ ಹಾಗೂ ಗದ್ದೆಗಳಿಗೆ ನೀರು ನುಗ್ಗಿತ್ತು.
ಮುಂಡಾಜೆಯ ಧೂಂಬೆಟ್ಟು,ಕಜೆ ಸೋಮಂತಡ್ಕ ಪರಿಸರದಲ್ಲಿ ಗುಡುಗು ಸಹಿತ ಮಳೆಯ ಜತೆ ಗಾಳಿಯು ಬೀಸಿದ್ದು ಕೆಲವು ತೋಟಗಳಲ್ಲಿ ಅಡಕೆ ಮರಗಳು ಮುರಿದು ಬಿದ್ದಿವೆ. ತೋಟತ್ತಾಡಿ ಪರಿಸರಸಲ್ಲಿಯೂ ಮಳೆ ಸುರಿದಿದ್ದು ತೋಟಗಳಿಗೆ ನೀರು ನುಗ್ಗಿದೆ.
ಮೃತ್ಯುಂಜಯ ಹಾಗೂ ನೇತ್ರಾವತಿ ನದಿಗಳ ನೀರಿನ ಹರಿವು ಹೆಚ್ಚಾಗಿದೆ. ಗುರುವಾಯನಕೆರೆ ಪರಿಸರದಲ್ಲಿ ಭಾರೀ ಮಳೆಗೆ ರಸ್ತೆಯಲ್ಲಿ ಮಳೆನೀರು ಹರಿದು ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಮದ್ದಡ್ಕದಲ್ಲಿ ಚರಂಡಿಗಳ ನೀರು ರಸ್ತೆಗೆ ಉಕ್ಕಿಹರಿದು ರಸ್ತೆ ಬದಿಯಲ್ಲಿರುವ ಅಂಗಡಿಗಳಿಗೆ ನೀರು ನುಗ್ಗಿದೆ.ವ್ಯಾಪಾರಸ್ಥರಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆಯುಂಟಾಯಿತು. ಸುಮಾರು ಅರ್ಥ ಗಂಟೆಕಾಲ ಈ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯಿತು.
Raksha Deshpande

Recent Posts

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

3 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

3 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

3 hours ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

3 hours ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

3 hours ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

4 hours ago