ಬೆಳ್ತಂಗಡಿ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಫೆ.4 ರಂದು ಜರಗಲಿರುವ ಮೂಡಪ್ಪ ಸೇವೆಯ ಪೂರ್ವಭಾವಿಯಾಗಿ ಬುಧವಾರ ಭಜನೋತ್ಸವ ಕಾರ್ಯಕ್ರಮದ ಜರಗಿತು. ಕೊಕ್ಕಡ ಪ್ಯಾಕ್ಸ್ ಅಧ್ಯಕ್ಷ ಕುಶಾಲಪ್ಪಗೌಡ ಪೂವಾಜೆ ಕಾರ್ಯಕ್ರಮ ಉದ್ಘಾಟಿಸಿದರು. ಕೊಕ್ಕಡ ಗ್ರಾಪಂ ಅಧ್ಯಕ್ಷ ಯೋಗೀಶ್ ಆಲಂಬಿಲ, ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಹಿರಿಯ ವೈದ್ಯ ಮೋಹನದಾಸ ಗೌಡ ಕೊಕ್ಕಡ,ಹರೀಶ್ ನೆರಿಯ ಮತ್ತಿತರರು ಉಪಸ್ಥಿತರಿದ್ದರು.
ಸಾಯಂಕಾಲ ನಡೆದ ಸಮಾರೋಪ ಸಮಾರಂಭದಲ್ಲಿ ಎಸ್ ಕೆ ಡಿ ಆರ್ ಡಿ ಪಿ ನಿರ್ದೇಶಕ ಜಯರಾಮ ನೆಲ್ಲಿತ್ತಾಯ,ಶ್ರೀ ಕ್ಷೇತ್ರ ಸೌತಡ್ಕದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣಭಟ್, ಕೊಕ್ಕಡ ಪ್ಯಾಕ್ಸ್ ಉಪಾಧ್ಯಕ್ಷ ಈಶ್ವರ ಭಟ್ ಮತ್ತಿತರರು ಉಪಸ್ಥಿತರಿದ್ದರು. 16 ಭಜನೆಗಳು ತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು.
ಸೌತಡ್ಕ ಗೋಶಾಲೆಯಿಂದ ದೇವಸ್ಥಾನದವರೆಗೆ ಭಜನೆಯ ಶೋಭಾಯಾತ್ರೆ ಜರಗಿತು.ಫೆ.3ರಂದು ಯಕ್ಷೋತ್ಸವ ಕಾರ್ಯಕ್ರಮ ಜರಗಲಿದೆ.