ಮಂಗಳೂರು,ಮೇ.10(ಕ.ವಾ): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55 ನೇ ವಾರ್ಡಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಮಾರ್ನವಮಿ ಕಟ್ಟೆಯಿಂದ ಕೋಟಿ ಚೆನ್ನಯ್ಯ ವೃತ್ತದ ವರೆಗಿನ ಸುಮಾರು 5 ಕೋಟಿ ರೂ.ಗಳ ವೆಚ್ಚದ ಚತುಷ್ಪತ ಸ್ಮಾರ್ಟ್ ರಸ್ತೆಗೆ ನಿರ್ಮಾಣಕ್ಕೆ ಮೇ.10ರ ಮಂಗಳವಾರ ಬೆಳಿಗ್ಗೆ ಸ್ಥಳಿಯ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಭೂಮಿ ಪೂಜೆ ನೆರವೇರಿಸಿದರು.
ಈ ಸಂಧರ್ಭದಲ್ಲಿ ಮಂಗಳೂರು ಮಹಾ ಪೌರರಾದ ಪ್ರೇಮಾನಂದ ಶೆಟ್ಟಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಸ್ಥಳಿಯ ಕಾರ್ಪೋರೆಟರ್ ಶೈಲೇಶ್ ಶೆಟ್ಟಿ , ಇತರೆ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳಿಯ ಜನ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.
PHOTO and REPORT CREDIT : Ramachandra Bhat Photojournalist, Bengaluru