ಮಂಗಳೂರು : ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರದ ದುರಾಡಳಿತ ಖಂಡಿಸಿ ರಾಜ್ಯಾದ್ಯಂತ ನಡೆಯಲಿರುವ ಸ್ವಾಭಿಮಾನಿ ಅಭಿಯಾನಕ್ಕೆ ಫೆ. 12ರಂದು ಸಂಜೆ 5ಕ್ಕೆ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ಯುನಿಟಿ ಹಾಲ್ನಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಚಾಲನೆ ನೀಡಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಕಾರ್ಯಕ್ರಮದ ಸಂಚಾಲಕ ಎಂ.ಬಿ ಸದಾಶಿವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸರಕಾರವನ್ನು ಕಿತ್ತೂಗೆಯಲು ಜೆಡಿಎಸ್ ನಿರ್ಧರಿಸಿ ರಾಜ್ಯಾದ್ಯಂತ ಅಭಿಯಾನ ಹಮ್ಮಿಕೊಂಡಿದೆ. ಅಭಿಯಾನದ ಮೂಲಕ ಪಕ್ಷ ಸಂಘಟಿಸಲಾಗುವುದು ಎಂದರು.
ಪಕ್ಷದ ನಿಕಟಪೂರ್ವ ಜಿಲ್ಲಾ ಅಧ್ಯಕ್ಷ ಮಹಮ್ಮದ್ ಕುಂಞಿ, ಯುವ ಜನತಾದಳ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ, ಜಿಲ್ಲಾ ವಕ್ತಾರ ಸುಶಿಲ್ ನೊರೊನ್ಹಾ, ಮುಖಂಡರಾದ ವಸಂತ ಪೂಜಾರಿ, ಸುಕುಮಾರ, ರಾಕೇಶ್ ಉಪಸ್ಥಿತರಿದ್ದರು.