News Karnataka Kannada
Sunday, April 28 2024
ಮಂಗಳೂರು

ಹಲ್ಲೆಯಿಂದ ಮೃತಪಟ್ಟ ದಿನೇಶ್ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

Siddaramaiha
Photo Credit : News Kannada

ಬೆಳ್ತಂಗಡಿ : ಹಲ್ಲೆಯಿಂದ ಮೃತಪಟ್ಟ ಬೆಳ್ತಂಗಡಿ ತಾಲೂಕಿನ ಕನ್ಯಾಡಿ-2 ಗ್ರಾಮದ ದಲಿತ ಸಮುದಾಯದ ದಿನೇಶ್ ಎಂಬವರ ಮನೆಗೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿ, ಮನೆಮಂದಿಗೆ ಸಾಂತ್ವನ ತಿಳಿಸಿ ವೈಯಕ್ತಿಕವಾಗಿ ರೂ. ಒಂದು ಲಕ್ಷ ನೆರವು ನೀಡಿದರು.

ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷ ಅವರ ಕುಟುಂಬಕ್ಕೆ ರೂ. 25 ಲಕ್ಷ ಪರಿಹಾರವನ್ನು ಈಗಿನ ಸರಕಾರ ನೀಡಿದೆ. ಆದರೆ ದಿನೇಶ ಅವರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ತಾರತಮ್ಯ ತೋರಿದೆ. ಈ ಬಗ್ಗೆ ಅಸೆಂಬ್ಲಿಯಲ್ಲಿ ಚರ್ಚೆ ನಡೆಸಿ ಸೂಕ್ತ ಪರಿಹಾರ ದೊರಕಿಸಿಕೊಡುವಲ್ಲಿ ಹಾಗೂ ಇವರ ಸಾವಿಗೆ ಕಾರಣರಾದವರಿಗೆ ಶಿಕ್ಷೆಯಾಗುವಂತೆ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಸರಕಾರ ಯಾವುದೇ ಬಿಗಿಯಾದ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ, ಇದರಿಂದ ಜನ ಕಾನೂನನ್ನು ಕೈಗೆತ್ತಿಕೊಂಡು ಇಂತಹ ಅನಾಹುತಗಳು ಸಂಭವಿಸುತ್ತಿವೆ. ಇದನ್ನು ವಿರೋಧಿಸಿ ಮುಂದೆ ಇಂತಹ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ಎಂಎಲ್ ಸಿ ಹರೀಶ್ ಕುಮಾರ್,ಮಾಜಿ ಮುಖ್ಯ ಸಚೇತಕ ವಸಂತ ಬಂಗೇರ, ಸಚಿವ ರಮಾನಾಥ ರೈ,ಮಾಜಿ ಎಂಎಲ್ ಸಿ ಐವನ್ ಡಿಸೋಜಾ, ಬೆಳ್ತಂಗಡಿ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ಅಧ್ಯಕ್ಷರಾದ ಶೈಲೇಶ್ ಕುಮಾರ್ ಕುರ್ತೋಡಿ ಹಾಗೂ ರಂಜನ್ ಜಿ. ಗೌಡ, ಕಾರ್ಯದರ್ಶಿಗಳಾದ ಪ್ರವೀಣ್ ಹಾಗೂ ದಯಾನಂದ ಬೆಳಾಲು, ಮಾಜಿ ಜಿಪಂ ಸದಸ್ಯರಾದ ಶೇಖರ ಕುಕ್ಕೇಡಿ,ನಮಿತಾ, ಶಾಹುಲ್ ಹಮೀದ್, ಪ್ರಮುಖರಾದ ಅಬ್ದುಲ್ ರಹಿಮಾನ್ ಪಡ್ಪು, ಉಷಾ ಶರತ್, ಲಾವಣ್ಯ ಬಲ್ಲಾಳ್, ಮನೋಹರ ಇಳಂತಿಲ, ಚಂದು ಎಲ್, ವಸಂತ ಬಿ.ಕೆ, ಪ್ರಭಾಕರ ಧರ್ಮಸ್ಥಳ,  ಕೇಶವ ಬೆಳಾಲು, ಪ್ರಭಾಕರ ಓಡಿಲ್ನಾಳ, ರಮಾನಂದ ಧರ್ಮಸ್ಥಳ, ಭರತ್ ಜಯ ವಿಕ್ರಮ ಕಲ್ಲಾಪು ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು