Categories: ಮಂಗಳೂರು

ಹಲ್ಲೆಯಿಂದ ಮೃತಪಟ್ಟ ದಿನೇಶ್ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

ಬೆಳ್ತಂಗಡಿ : ಹಲ್ಲೆಯಿಂದ ಮೃತಪಟ್ಟ ಬೆಳ್ತಂಗಡಿ ತಾಲೂಕಿನ ಕನ್ಯಾಡಿ-2 ಗ್ರಾಮದ ದಲಿತ ಸಮುದಾಯದ ದಿನೇಶ್ ಎಂಬವರ ಮನೆಗೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿ, ಮನೆಮಂದಿಗೆ ಸಾಂತ್ವನ ತಿಳಿಸಿ ವೈಯಕ್ತಿಕವಾಗಿ ರೂ. ಒಂದು ಲಕ್ಷ ನೆರವು ನೀಡಿದರು.

ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷ ಅವರ ಕುಟುಂಬಕ್ಕೆ ರೂ. 25 ಲಕ್ಷ ಪರಿಹಾರವನ್ನು ಈಗಿನ ಸರಕಾರ ನೀಡಿದೆ. ಆದರೆ ದಿನೇಶ ಅವರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ತಾರತಮ್ಯ ತೋರಿದೆ. ಈ ಬಗ್ಗೆ ಅಸೆಂಬ್ಲಿಯಲ್ಲಿ ಚರ್ಚೆ ನಡೆಸಿ ಸೂಕ್ತ ಪರಿಹಾರ ದೊರಕಿಸಿಕೊಡುವಲ್ಲಿ ಹಾಗೂ ಇವರ ಸಾವಿಗೆ ಕಾರಣರಾದವರಿಗೆ ಶಿಕ್ಷೆಯಾಗುವಂತೆ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಸರಕಾರ ಯಾವುದೇ ಬಿಗಿಯಾದ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ, ಇದರಿಂದ ಜನ ಕಾನೂನನ್ನು ಕೈಗೆತ್ತಿಕೊಂಡು ಇಂತಹ ಅನಾಹುತಗಳು ಸಂಭವಿಸುತ್ತಿವೆ. ಇದನ್ನು ವಿರೋಧಿಸಿ ಮುಂದೆ ಇಂತಹ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ಎಂಎಲ್ ಸಿ ಹರೀಶ್ ಕುಮಾರ್,ಮಾಜಿ ಮುಖ್ಯ ಸಚೇತಕ ವಸಂತ ಬಂಗೇರ, ಸಚಿವ ರಮಾನಾಥ ರೈ,ಮಾಜಿ ಎಂಎಲ್ ಸಿ ಐವನ್ ಡಿಸೋಜಾ, ಬೆಳ್ತಂಗಡಿ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ಅಧ್ಯಕ್ಷರಾದ ಶೈಲೇಶ್ ಕುಮಾರ್ ಕುರ್ತೋಡಿ ಹಾಗೂ ರಂಜನ್ ಜಿ. ಗೌಡ, ಕಾರ್ಯದರ್ಶಿಗಳಾದ ಪ್ರವೀಣ್ ಹಾಗೂ ದಯಾನಂದ ಬೆಳಾಲು, ಮಾಜಿ ಜಿಪಂ ಸದಸ್ಯರಾದ ಶೇಖರ ಕುಕ್ಕೇಡಿ,ನಮಿತಾ, ಶಾಹುಲ್ ಹಮೀದ್, ಪ್ರಮುಖರಾದ ಅಬ್ದುಲ್ ರಹಿಮಾನ್ ಪಡ್ಪು, ಉಷಾ ಶರತ್, ಲಾವಣ್ಯ ಬಲ್ಲಾಳ್, ಮನೋಹರ ಇಳಂತಿಲ, ಚಂದು ಎಲ್, ವಸಂತ ಬಿ.ಕೆ, ಪ್ರಭಾಕರ ಧರ್ಮಸ್ಥಳ,  ಕೇಶವ ಬೆಳಾಲು, ಪ್ರಭಾಕರ ಓಡಿಲ್ನಾಳ, ರಮಾನಂದ ಧರ್ಮಸ್ಥಳ, ಭರತ್ ಜಯ ವಿಕ್ರಮ ಕಲ್ಲಾಪು ಮತ್ತಿತರರು ಉಪಸ್ಥಿತರಿದ್ದರು.

Gayathri SG

Recent Posts

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

1 min ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

20 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

22 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

37 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

39 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

1 hour ago