News Karnataka Kannada
Tuesday, May 07 2024
ಮಂಗಳೂರು

ಹಿಜಾಬ್ ತೀರ್ಪು ಹಿನ್ನೆಲೆ, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಹೈ ಅಲರ್ಟ್

Mangalore
Photo Credit : News Kannada

ಮಂಗಳೂರು : ಹೈಕೋರ್ಟ್ ನಿಂದ ಇಂದು ಹಿಜಾಬ್ ಕುರಿತು ತೀರ್ಪು ಹೊರಬೀಳಲಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ 1200ಕ್ಕೂ ಅಧಿಕ ಪೊಲೀಸರು ಬಂದೋಬಸ್ತ್ ಕಾರ್ಯದಲ್ಲಿ ನಿಯೋಜನೆಗೊಂಡಿದ್ದಾರೆ ಎಂದು ಕಮಿಷನರ್ ಎನ್ . ಶಶಿಕುಮಾರ್ ತಿಳಿಸಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್ ಬಳಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಬಂದೋಬಸ್ತ್ ಬಗ್ಗೆ ಸೂಚನೆಗಳನ್ನು ನೀಡಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಹಿರಿಯ ಅಧಿಕಾರಿಗಳು ನಿನ್ನೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಲಹೆ ನೀಡಿದ್ದಾರೆ. ಮಂಗಳೂರು ಕಮಿಷನರೇಟ್ 2000ಕ್ಕೂ ಅಧಿಕ ಪೊಲೀಸ್ ಅಧಿಕಾರಿ, ಸಿಬ್ಬಂದಿ ಬಲವನ್ನು ಹೊಂದಿದೆ ಎಂದರು.

ಬೆಳಗ್ಗೆ 9 ಗಂಟೆಯಿಂದಲೇ 1200ಕ್ಕೂ ಅಧಿಕ ಪೊಲೀಸರು ಬಂದೋಬಸ್ತ್ ‌ಕಾರ್ಯದಲ್ಲಿ ನಿರತರಾಗಿದ್ದಾರೆ. ಜಿಲ್ಲಾಧಿಕಾರಿ ಈಗಾಗಲೇ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಈ ನಡುವೆ ನಿಷೇಧಾಜ್ಞೆಯನ್ನು ಹೇರಲಾಗಿದೆ. ಈ ಹಿಂದೆ ಕೋವಿಡ್, ಹಿಜಾಬ್- ಕೇಸರಿಶಾಲು ಪ್ರಕರಣ ಸಂದರ್ಭದಲ್ಲಿಯೂ ಮಂಗಳೂರಿನ ಜನತೆ, ಸಂಘಟನೆಗಳು ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಹಕರಿಸಿದ್ದಾರೆ ಎಂದು ಅವರು ಹೇಳಿದರು.

ಡಿಸಿಪಿ ದಿನೇಶ್ ಕುಮಾರ್, ಎಸಿಪಿಗಳಾದ ಪಿ.ಎ. ಹೆಗಡೆ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು