ಯೆಲ್ಲಾಪುರ : ಮುಂಬೈನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ಘಟನೆ ನಡೆದಿದೆ ಅದೃಷ್ಟವಶಾತ್ ಬ0ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಮುಂಬಯಿಯಿಂದ ಇಪ್ಪತ್ತೆಂಟು ಪ್ರಯಾಣಿಕರೊಂದಿಗೆ ಮಂಗಳೂರಿಗೆ ಬರುತ್ತಿದ್ದ ಸ್ಲೀಪಿಂಗ್ ಕೋಚ್ ಆಗಿರುವ ಈ ಬಸ್ಸು ಪಟ್ಟಣದ ಮಾರುತಿ ದೇವಸ್ಥಾನದ ಎದುರಿನ ಘಟ್ಟದ ರಸ್ತೆ ಹಿಂಬದಿಯ ಟಯರ್ ಸ್ಫೋಟವಾಯಿತು .ಟೈರ್ ಸ್ಫೋಟವಾದ ಬಳಿಕ ಬಸ್ ಸ್ವಲ್ಪ ದೂರ ಬಸ್ ಚಲಿಸಿದ್ದು ಆಗ ಕೂಡಲೆ ಪ್ರಯಾಣಿಕರನ್ನ ಬಸ್ಸಿನಿಂದ ಕೆಳಗೆ ಇಳಿಸಲಾಯಿತು
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದರು ಆದರೆ ಆದಾಗಲೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಬಸ್ ನಲ್ಲಿದ್ದ ಪ್ರಯಾಣಿಕರನ್ನು ಅವರವರ ಊರಿಗೆ ಬೇರೆ ಬಸ್ಸುಗಳಲ್ಲಿ ಕಳುಹಿಸುವ ವ್ಯವಸ್ಥೆ ಮಾಡಲಾಯಿತು
ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಬಸ್ಸು ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ