News Karnataka Kannada
Monday, April 29 2024
ಮಂಗಳೂರು

ಹೆಲಿಕಾಪ್ಟರ್ ದುರಂತ : ಮಂಗಳೂರಿನಲ್ಲಿ ಮೂರು ಮಂದಿಯ ವಿರುದ್ಧ ಪ್ರಕರಣ ದಾಖಲು

Arrest 22082021
Photo Credit :

ಮಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನೆಯ ಸಶಸ್ತ್ರ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ ಯೋಧರ ಸಾವಿಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಮೂರು ಮಂದಿಯ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳ ಪೈಕಿ ಓರ್ವ ಬೆಂಗಳೂರು, ಇನ್ನೋರ್ವ ಕಾರ್ಕಳ ಹಾಗೂ ಮತ್ತೋರ್ವ ಮಂಗಳೂರು ಮೂಲದವರು. ಫೇಸ್‌ಬುಕ್ ಖಾತೆಗಳು ಅಸಲಿಯೇ ಅಥವಾ ನಕಲಿಯೆ? ಎಲ್ಲಿಂದ ಈ ಖಾತೆಗಳನ್ನು ತೆರೆಯಲಾಗಿದೆ? ಎಂಬಿತ್ಯಾದಿ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಸಂತ್ ಕುಮಾರ್ ಟಿ.ಕೆ ಎಂಬ ಫೇಸ್‌ಬುಕ್ ಖಾತೆಯಿಂದ ಮತ್ತು ಸುಬ್ಬರಾವ್ ರವಿಕುಮಾರ್ ಎಂಬ ಹೆಸರಿನ ಫೇಸ್‌ಬುಕ್‌ ಖಾತೆಯಿಂದ ಜನರಲ್ ಬಿಪಿನ್ ರಾವತ್ ಅವರ ಕುರಿತು ಹಾಗೂ ಶ್ರೀನಿವಾಸ ಕಾರ್ಕಳ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಬಿಪಿನ್ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ.

ಆರೋಪಿಗಳು ಜಾಲತಾಣಗಳಲ್ಲಿ ಬಿಪಿನ್ ರಾವತ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಬಗ್ಗೆಯೂ ಸಾಕಷ್ಟು ಪ್ರಚೋದನಕಾರಿ ಪೋಸ್ಟ್ ಹಾಕಿರುವುದು ಪತ್ತೆಯಾಗಿದೆ. ಈ ಬಗ್ಗೆ ಸುಶಾಂತ್ ಎಂಬವರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಶಶಿಕುಮಾರ್ ತಿಳಿಸಿದರು.

ಅವಮಾನ ಮಾಡುವಂತಹ ಹೇಳಿಕೆಗಳು ಜನಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಹಾಗೂ ಅಪಾಯ ಭೀತಿಯನ್ನು ಹುಟ್ಟಿಸುವ ಉದ್ದೇಶ ಹೊಂದಿದೆ. ಆರೋಪಿಗಳನ್ನು ಶೀಘ್ರ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುವುದು ಎಂದವರು ಸ್ಪಷ್ಟಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು