Categories: ಮಂಗಳೂರು

ಹೋಟೆಲ್ ಆರಂಭಿಸಲೆಂದು ವಿದೇಶಿ ಪ್ರಜೆಯಿಂದ 7ಲಕ್ಷ ರೂ ಪಡೆದು ವಂಚನೆ

ಮಂಗಳೂರು : ವ್ಯಕ್ತಿಯೋರ್ವ ಹೋಟೆಲ್ ಆರಂಭಿಸಲೆಂದು ನಗರದಲ್ಲಿ ವಾಸವಿದ್ದ ವಿದೇಶಿ ಪ್ರಜೆಯೊಬ್ಬ ನಿಂದ ಸುಮಾರು 7ಲಕ್ಷ ರೂಪಾಯಿ ಹಣವನ್ನು ಪಡೆದು ವಂಚಿಸಿದ ಘಟನೆ ನಡೆದಿದೆ.

ಈ ಬಗ್ಗೆ ಮಾಹಿತಿ ನೀಡಿದ ಕಮಿಷನರ್ ಶಶಿಕುಮಾರ ಫ್ರಾನ್ಸ್ ಮೂಲದ ಇಪ್ಪತ್ತೇಳು ವರ್ಷದ ಫೀಲ್ ಎಂಬಾತ ನಗರದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ . ಈತ ಚಿಲಿಂಬಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಕಳೆದ 1ವರ್ಷದಿಂದ ವಾಸಿಸುತ್ತಿದ್ದಾನೆ .ಈತನ ಬಳಿ ಅಪರಿಚಿತ ವ್ಯಕ್ತಿಯೋರ್ವ ಹೋಟೆಲ್ ಆರಂಭಿಸಲೆಂದು 7ಲಕ್ಷ ರೂ ಪಡೆದಿದ್ದು ನಂತರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ .

ಯೋ ಫೀಲ್ ಕ್ರೀಡಾಪಟುವಾಗಿದ್ದು ಹೋಟೆಲ್ ಮಂಗಳೂರಿನ ಸೈಕ್ಲಿಸ್ಟ್ ಗಳ ಸಂಪರ್ಕ ಹೊಂದಿದ್ದನು ತನ್ನ ಪರಿಚಯಸ್ಥ ಸೈಕ್ಲಿಸ್ಟ್ ಗಳಲ್ಲಿ ತನಗಾದ ವಂಚನೆ ಬಗ್ಗೆ ತಿಳಿಸಿದ್ದಾನೆ ಅವರ ಸಲಹೆಯಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ .ಈ ಬಗ್ಗೆ ಮುತುವರ್ಜಿ ವಹಿಸಿ ತನಿಖೆ ನಡೆಸಿರುವ ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದರು.

ಈ ವೇಳೆ ವಂಚಿಸಿದ್ದ ಯುವಕನ ತಂದೆ ಫ್ರಾನ್ಸ್ ಪ್ರಜೆಗೆ ವಂಚಿಸಿರುವ ಹಣವನ್ನು ವಾಪಸು ನೀಡಿದ್ದಾರೆ

ಆರೋಪಿಯನ್ನೂ ಬಂಧಿಸಲಾಗಿಲ್ಲ ವಿಚಾರಣೆಗೆ ಕರೆದ ಸಂದರ್ಭ ಠಾಣೆಗೆ ಹಾಜರಾಗಬೇಕೆಂದು ನೋಟಿಸ್ ಕೊಟ್ಟು ಕಳುಹಿಸಲಾಗಿದೆ.

ವಂಚನೆಗೊಳಗಾದ 7ಲಕ್ಷ ರೂ ಹಣವನ್ನು ಮರಳಿ ತೆಗೆಸಿಕೊಟ್ಟ ಮಂಗಳೂರು ಪೊಲೀಸ್ ಇಲಾಖೆಗೆ ವಿದೇಶಿ ಪ್ರಜೆ ಯೋ ಫಿಲ್ ಪತ್ರದ ಮೂಲಕ ಧನ್ಯವಾದ ತಿಳಿಸಿದ್ದಾಳೆ . ಮಂಗಳೂರಿಗೆ ವಿದೇಶದಿಂದ ಬರುವವರಿಗೆ ಇಲ್ಲಿನ ಸ್ಥಳೀಯರು ಅತ್ಯಂತ ವಿಶ್ವಾಸದಿಂದ ನಡೆದುಕೊಂಡವರು ಯಾರೋ ಒಬ್ಬರು ಈ ರೀತಿ ನಡೆದುಕೊಳ್ಳುವುದರಿಂದ ನಮಗೆ ಕೆಟ್ಟ ಭಾವನೆ ಉಂಟಾಗುವ ಸಾಧ್ಯತೆ ಇದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ

 

 

Ashika S

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

5 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

6 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

10 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

21 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

26 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

42 mins ago