ಬಂಟ್ವಾಳ: ಕಾರಿನಲ್ಲಿ ಯಾವುದೇ ದಾಖಲಾತಿ ಇಲ್ಲದ ಲಕ್ಷಾಂತರ ರೂ ನಗದು ಹಣ ಪತ್ತೆಯಾಗಿದ್ದು, ವಿಟ್ಲ ಪೊಲೀಸರ ಕಾರ್ಯಚರಣೆ ವೇಳೆ ನಗದು ಸಹಿತ ಕಾರನ್ನು ವಶಕ್ಕೆ ಪಡೆದುಕೊಂಡ ಘಟನೆ ಸಾಲೆತ್ತೂರು ಗ್ರಾಮದ ಮೆದು ಎಂಬಲ್ಲಿ ನಡೆದಿದೆ.
ಚುನಾವಣೆ ಪ್ರಯುಕ್ತ ಅಂತರರಾಜ್ಯ ಚೆಕ್ ಪೋಸ್ಟ್ನಲ್ಲಿ ವಿಟ್ಲ ಎಸ್.ಐ.ಸಂದೀಪ್ ಶೆಟ್ಟಿ ಸಿಬ್ಬಂದಿ ಜೊತೆ ವಾಹನ ತಪಾಸಣೆ ನಡೆಸುತ್ತಿರುವಾಗ ಸಾಲೆತ್ತೂರು ಕಡೆಯಿಂದ ಬಾಕ್ರಬೈಲು ಕಡೆಗೆ ಹೋಗುತ್ತಿದ್ದ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಾಗ ಸಾಗಾಟ ಗಮನಕ್ಕೆ ಬಂದಿದೆ.
ಚಾಲಕ ಬಶೀರ್ ಎಂಬಾತನ ಕಾರಿನ ಡ್ಯಾಶ್ ಬೋರ್ಡ್ನಲ್ಲಿ 500 ರೂಪಾಯಿ ಮುಖ ಬೆಲೆಯ ತಲಾ 100 ನೋಟುಗಳಿರುವ 3 ಬಂಡಲ್ಗಳನ್ನು ಸಾಗಿಸುತ್ತಿದ್ದು, ಇದರ ಒಟ್ಟು ಮೌಲ್ಯ 1.50,000 ಆಗಿದೆ.
ಹಣದ ಬಗ್ಗೆ ವಿಚಾರಣೆ ನಡೆಸಿದ ಪೊಲೀಸರಿಗೆ ಯಾವುದೇ ದಾಖಲೆಗಳು ಸಮರ್ಪಕವಾಗಿ ಸಿಗದೇ ಇದ್ದ ಕಾರಣ ಹಣ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…
ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ…
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…