News Karnataka Kannada
Thursday, May 09 2024
ಮಂಗಳೂರು

ಹಡಗಿನಲ್ಲಿ ಅಪಾಯದಲ್ಲಿ ಸಿಲುಕಿದ್ದ 15 ಮಂದಿ ವಿದೇಶಿಗರ ರಕ್ಷಣೆ

No oil leak was noticed on the sinking ship
Photo Credit :

ಉಳ್ಳಾಲ: ಉಳ್ಳಾಲದಿಂದ 5.2 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ್ದ ಹಡಗಿನಲ್ಲಿದ್ದ 15 ಮಂದಿ ಸಿರಿಯಾ ದೇಶದವರನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ.

ಪ್ರಿನ್ಸಸ್ ಮಿರಲ್ ಹೆಸರಿನ ಹಡಗು ಮಲೇಷ್ಯಾದಿಂದ ಲೆಬನಾನ್ ದೇಶಕ್ಕೆ ತೆರಳುತ್ತಿತ್ತು. ಈ ಹಡಗಿನಲ್ಲಿ ಎಂಟು ಸಾವಿರ ಟನ್ ಸ್ಟೀಲ್ ಕಾಯಿಲ್ ಸಾಗಿಸಲಾಗುತ್ತಿತ್ತು. ಎಂಜಿನ್‍ನ ಒಳಭಾಗದಲ್ಲಿ ಸಣ್ಣ ರಂಧ್ರ ಮೂಲಕ ನೀರು ಬರಲು ಪ್ರಾರಂಭಿಸಿದ್ದು, ಇದನ್ನು ತುರ್ತು ದುರಸ್ತಿ ಪಡಿಸುವ ಸಲುವಾಗಿ ಲಂಗರಿಗೆ ಅವಕಾಶ ಕಲ್ಪಿಸುವಂತೆ ನೌಕೆಯ ಕ್ಯಾಪ್ಟನ್ ಬಂದರು ಅಧಿಕಾರಿಗಳನ್ನು ಮಂಗಳವಾರ ಸಂಪರ್ಕಿಸಿದ್ದರು.

ಮಂಗಳೂರು ಹಳೆ ಬಂದರಿನಿಂದ ಉಳ್ಳಾಲ ಕಡೆಗೆ 5.2 ಮೈಲಿ ದೂರದಲ್ಲಿ ಅಪಾಯಕ್ಕೆ ಸಿಲುಕಿ ಲಂಗರು ಹಾಕಲಾಗಿತ್ತು. ಕೋಸ್ಟ್ ಗಾರ್ಡ್‍ನ ವಿಕ್ರಮ್ ಮತ್ತು ಮತ್ತೊಂದು ಹಡಗುಗಳ ಮೂಲಕ ಸಮುದ್ರ ರಭಸದ ಮಧ್ಯೆ ಕಾರ್ಯಾಚರಣೆ ನಡೆಸಿ, ಅಪಾಯದಲ್ಲಿದ್ದ ನೌಕೆಯಿಂದ ಕ್ಯಾಪ್ಟನ್ ಹಾಗೂ ಸಿಬ್ಬಂದಿ ಸೇರಿ 15 ಮಂದಿಯನ್ನು ರಕ್ಷಿಸಲಾಗಿದೆ.

ದಕ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಜೂ.22ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡುವ ಮೂಲಕ ಹವಾಮಾನ ಇಲಾಖೆ ಭರ್ಜರಿ ಮಳೆಯಾಗುವ ಸೂಚನೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು