ಪುತ್ತೂರು : ಬೆಳ್ಳಂಬೆಳಿಗೆ ಚೆಲ್ಯಡ್ಕದಲ್ಲಿ 20 ಅಡಿ ಕಂದಕಕ್ಕೆ ಉರುಳಿ ಬಿದ್ದ ಮಗು ಸಹಿತ ಐವರಿದ್ದ ಕಾರು.ಐವರು ಪ್ರಯಾಣಿಸುತ್ತಿದ್ದ ಕಾರೊಂದು ಪುತ್ತೂರು – ಪಾಣಾಜೆ ರಸ್ತೆಯ ಚೆಲ್ಯಡ್ಕ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಡಿ. 16ರ ಬೆಳಿಗ್ಗೆ ನಡೆದಿದೆ. ಅಪಾಯಕಾರಿ ಸ್ಥಿತಿಯಲ್ಲಿ ಕಾರು ಉರುಳಿ ಬಿದ್ದಿದ್ದರು ಪವಾಡ ಸದೃಶ್ಯ ವಾಗಿ ಐವರು ಯಾವುದೇ ಪ್ರಾಣಾಪಾಯ ಗಳಿಲ್ಲದ್ದೆ ಪಾರಾಗಿ ದ್ದಾರೆ.
ಬೆಟ್ಟಂಪಾಡಿ ಬಳಿಯ ಡೆಮ್ಮಂಗಾರದಿಂದ ಪುತ್ತೂರು ಕಡೆಗೆ ಹೊರಟಿದ್ದ ಆಲ್ಟೋ-800 ಕಾರು ಉಪ್ಪಳಿಗೆ ಸಮೀಪದ ಚೆಲ್ಯಡ್ಕ ಎಂಬಲ್ಲಿ ರಸ್ತೆಯ ಬದಿಯ ತೋಟಕ್ಕೆ ಉರುಳಿ ಬಿದ್ದಿದೆ.
ಉಪ್ಪಳಿಗೆಯ ಚೆಲ್ಯಡ್ಕ ತಿರುವಿನ ಬಳಿ ಚಾಲಕನ ಹತೋಟಿ ಕಳಕೊಂಡು ಅವಘಡ ಸಂಭವಿಸಿದೆ. ಕಾರಿನಲ್ಲಿ ಮಗು ಸಹಿತ ಐವರು ಪ್ರಯಾಣಿಸುತ್ತಿದ್ದರು. ಕಾರು ಕಂದಕಕ್ಕೆ ಉರುಳಿ ಬಿದ್ದ ವೇಳೆ ಪಲ್ಟಿಯಾಗಿತ್ತು.
ಅಪಘಾತದ ತೀವ್ರತೆಯನ್ನು ಗಮನಿಸಿದಾಗ ಭಾರಿ ಅನಾಹುತ ಸಂಭವಿಸಿದಂತೆ ಕಂಡು ಬರುತ್ತಿತ್ತಾದರೂ ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸದೆ ಎಲ್ಲರು ಸುರಕ್ಷಿತವಾಗಿ ಮೇಲೆ ಬಂದಿದ್ದಾರೆ
ಕೈಕಾಲು ಎಳೆತದಂತಹ ಕಾಯಿಲೆ ಅರ್ಥಾತ್ ಸಂಧಿವಾತ ಹೆಚ್ಚು ನೀರಲ್ಲಿ ಕೆಲಸ ಮಾಡುವವರನ್ನು ಇಲ್ಲಿಲ್ಲದಂತೆ ಕಾಡುತ್ತದೆ. ಅದರಲ್ಲೂ ಶೀತ ಪ್ರದೇಶದಲ್ಲಿ ಕೆಲಸ…
ಇನ್ಸ್ಟಾಗ್ರಾಮ್ ಲೈವ್ ಮಾಡವುದಕ್ಕಾಗಿ ಸ್ನೇಹಿತ ಕಾರಿನ ವೇಗವನ್ನು ಹೆಚ್ಚಿಸಿದ್ದು ನಂತರ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದ್ದು ನಾಲ್ವರು ಸಾವನಪ್ಪಿದ್ದು…
ಮಳೆ ಇಲ್ಲದೆ ಬರ ಪರಿಸ್ಥಿರಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಲ್ಲ ಸೇರಿಕೊಂಡು ಕತ್ತೆಗಳಿಗೆ ಮದುವೆ ಮಾಡಿ ವರುಣರಾಯನಿಗಾಗಿ ಪ್ರಾರ್ಥಿಸಿದ…
ಪಂಚವಾರ್ಷಿಕ ಯೋಜನೆಯಾಗಿ ಉಳಿದಿದ್ದ ನಮ್ಮ ಮೆಟ್ರೋ ಹಸಿರು ಕಾರಿಡಾರ್ನ ನಾಗಸಂದ್ರ ಹಾಗೂ ಮಾದಾವರದ ನಡುವಿನ 3.7 ಕಿಮೀ ಮಾರ್ಗ ಜುಲೈ…
ಎಲ್ಬಿ ನಗರದ ಕಾಮಿನೇನಿ ಆಸ್ಪತ್ರೆಯ ವೈದ್ಯರು 66 ವರ್ಷದ ರೋಗಿಯ ಹೃದಯದ ಬಳಿ ಅನ್ನನಾಳದಲ್ಲಿ ಸಿಲುಕಿದ್ದ ಮಟನ್ ಮೂಳೆಯನ್ನು ಯಶಸ್ವಿಯಾಗಿ…
ಬಿಜೆಪಿಯು ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶಪಡಿಸಲು ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ…