News Karnataka Kannada
Thursday, May 09 2024
ಮಂಗಳೂರು

ಆಳ್ವಾಸ್ ಪುನರ್ಜನ್ಮದ 3ನೇ ವರ್ಷದ ವಾರ್ಷಿಕೋತ್ಸವ-ಕುಟುಂಬ ಸಮ್ಮಿಲನ

3rd anniversary of Alva's reincarnation-family reunion
Photo Credit : News Kannada

ಮೂಡುಬಿದಿರೆ: ತಪ್ಪುಗಳನ್ನು ತಿದ್ದಿಕೊಂಡು ಜೀವನದಲ್ಲಿ ಸರಿ ದಾರಿಯತ್ತ ಮುನ್ನಡೆಯಬೇಕು. ನಮ್ಮ ನಡೆ-ನುಡಿ, ಆಚಾರ-ವಿಚಾರಗಳಿಂದ ಬದುಕನ್ನು ಬದಲಾಯಿಸಲು ಸಾಧ್ಯ. ಬದುಕು ಅಮೂಲ್ಯವಾದದ್ದು ಅದನ್ನು ಪರಿಶುದ್ಧವಾಗಿಟ್ಟುಕೊಳ್ಳಬೇಕು. ಮದ್ಯ ವ್ಯಸನಕ್ಕೆ ಒಳಗಾಗಿ ಇನ್ನು ಬದುಕೇ ಮುಗೀತು ಎನ್ನುವವರಿಗೆ ಪುನರ್ಜನ್ಮ ಹೊಸ ಬದುಕು ಕಟ್ಟಿಕೊಡಲು ಹಾಗು ಸಮಾಜದ ಮುಖ್ಯ ವಾಹಿನಿಗೆ ತಲುಪಲು ಸಹಾಯ ಹಸ್ತ ನೀಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಿಇಒ ಡಾ.ಕುಮಾರ್ ಹೇಳಿದರು.

ಆಳ್ವಾಸ್ ಹೊಮಿಯೋಪತಿ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಆಳ್ವಾಸ್ ಪುನರ್ಜನ್ಮದ 3ನೇ ವರ್ಷದ ವಾರ್ಷಿಕೋತ್ಸವ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಆಳ್ವಾಸ್ ಹೆಲ್ತ್ ಸೆಂಟರ್ ನಿರ್ದೇಶಕ ಡಾ.ವಿನಯ್ ಆಳ್ವ ಅಧ್ಯಕ್ಷತೆ ವಹಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ನ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಉಡುಪಿಯ ಡಾ.ಪಿ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯ ಮನೋವೈದ್ಯ ಡಾ. ಪಿ.ವಿ ಭಂಡಾರಿ ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಸ್ವಾಗತಿಸಿದರು. ವಿದ್ಯಾರ್ಥಿನಿ ಪವಿತ್ರಾ ಕುಂದಾಪುರ ಕಾರ್ಯಕ್ರಮ ನಿರೂಪಿಸಿದರು. ಆಳ್ವಾಸ್ ಪುನರ್ಜನ್ಮದ ಆಪ್ತ ಸಮಾಲೋಚಕ ಲೋಹಿತ್. ಕೆ ವಂದಿಸಿದರು.

ಆಳ್ವಾಸ್ ಪದವಿ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕಿ ಡಾ. ಮಧುಮಾಲ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು