News Karnataka Kannada
Friday, May 03 2024
ಮಂಗಳೂರು

“ಈ ದೇಶದಲ್ಲಿ 50 ರಾಜ್ಯಗಳು ಉದಯವಾಗುತ್ತದೆ”: ಸಚಿವ ಉಮೇಶ್ ಕತ್ತಿ

Untitled 1 Recovered
Photo Credit :

ಬೆಳ್ತಂಗಡಿ: 2024ರ ಚುನಾವಣೆ ನಂತರ ಈ ದೇಶದಲ್ಲಿ 50 ರಾಜ್ಯಗಳು ಉದಯವಾಗುತ್ತದೆ.ಈ ಬಗ್ಗೆ ಮೋದಿ ಚಿಂತನೆ ನಡೆಸಿದ್ದು, ಸಿದ್ದತೆ ನಡೆಯುತ್ತಿದೆ. ಎಂದು ರಾಜ್ಯ ಅರಣ್ಯ ಮತ್ತು ರಾಜ್ಯ ಆಹಾರ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬಡಕೋಡಿ ಗ್ರಾಮದ ಎರ್ಮೋಡಿ ಅರಣ್ಯ ಪ್ರದೇಶದಲ್ಲಿ ದಶಲಕ್ಷ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಎರಡೂವರೆ ಕೋಟಿ ಇದ್ದ ಜನಸಂಖ್ಯೆ ರಾಜ್ಯದಲ್ಲಿ ಆರೂವರೆ ಕೋಟಿ ಆಗಿದೆ ಇದರ ಅರ್ಥ, ಜನಸಂಖ್ಯೆ ಬೆಳೆದಂತೆ ರಾಜ್ಯವನ್ನು ಇಬ್ಭಾಗ ಮಾಡಬೇಕಿದೆ ಕರ್ನಾಟಕದಲ್ಲಿ ಎರಡು, ಉತ್ತರಪ್ರದೇಶ ಐದು ರಾಜ್ಯ ಮತ್ತು ಮಹಾರಾಷ್ಟ್ರ 3 ರಾಜ್ಯಹೀಗೆ ಇಡೀ ದೇಶದಲ್ಲಿ ಒಟ್ಟು 50 ರಾಜ್ಯ ನಿರ್ಮಾಣವಾಗಲಿದೆ  ಈ ಬಗ್ಗೆ ದೇಶದ ಪ್ರಧಾನಿಗಳು ಚಿಂತನೆ ನಡೆಸಿದ್ದಾರೆ ಎಂಬುದು ನನ್ನ ಅನಿಸಿಕೆ ಎಂದರು.

ಉತ್ತರ ಕರ್ನಾಟಕಕ್ಕೆ ಅನ್ಯಾಯವಾದಾಗ ಧ್ವನಿ ಎತ್ತಿದ್ದೇನೆ, ಮುಂದೆಯೂ ಎತ್ತುತ್ತೇನೆ ಆದರೂ ಅಖಂಡ ಕರ್ನಾಟಕದಲ್ಲಿ ತೊಂದರೆ ಆಗಬಾರದು ಅನ್ನೋ ಕಾರಣಕ್ಕೆ ಮುಖ್ಯಮಂತ್ರಿಗಳನ್ನ ಎಚ್ಚರಿಸ್ತೇನೆ ಅದು ಬಿಟ್ಟರೆ ನಾವು ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಪ್ರಧಾನಿ ಚಿಂತನೆ ಮಾಡಿದ್ದಾರೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಲಿ, ಅಭಿವೃದ್ಧಿಯಾಗಲಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು