News Karnataka Kannada
Monday, May 06 2024
ಮಂಗಳೂರು

ಬಂಟ್ವಾಳ ವಿಧಾನಸಭಾ ಕ್ಷೇತ್ರದ 5 ನೇ ಜನಸ್ಪಂದನಾ ಕಾರ್ಯಕ್ರಮ

5th Janaspandana Programme of Bantwal Assembly Constituency
Photo Credit : By Author

ಬಂಟ್ವಾಳ: ಕಾನೂನಿನ ಚೌಕಟ್ಟಿನಡಿಯಲ್ಲಿ ಸರಕಾರ ಮಟ್ಟದಲ್ಲಿ ಆಗುವ ಪ್ರತಿಯೊಂದು ಕೆಲಸಗಳನ್ನು ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನಸ್ಪಂದನ ಕಾರ್ಯಕ್ರಮದ ಮೂಲಕ ಪ್ರಯತ್ನಿಸಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಹೇಳಿದರು.

ಅವರು ಮಾಣಿ ಜಿ.ಪಂ‌.ವ್ಯಾಪ್ತಿಯಲ್ಲಿ ನಡೆದ ಬಂಟ್ವಾಳ ವಿಧಾನಸಭಾ ಕ್ಷೇತ್ರದ 5 ನೇ ಜನಸ್ಪಂದನಾ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.ಗ್ರಾಮದ ಜನರು ಸಮಸ್ಯೆ ಗಳ ಕಡತಗಳನ್ನು ಹಿಡಿದುಕೊಂಡು ಕಚೇರಿ ಕಚೇರಿಗೆ ಅಲೆದಾಡಿ ಇತ್ಯರ್ಥವಾಗದ ಸಮಸ್ಯೆಗಳನ್ನು ಪರಿಹಾರ ಮಾಡುವ ಕೆಲಸ ಮಾಡಲಾಗುತ್ತಿದೆ,

ಜನರಿಗೆ ಸ್ಪಂದನೆ ಕೊಡುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಕಾರ್ಯಕ್ರಮದ ಪ್ರಯೋಜನ ಪಡೆಯಲು ಅವರು ವಿನಂತಿ ಮಾಡಿದರು.

ಮಾಣಿ ಜಿ.ಪಂ.ವ್ಯಾಪ್ತಿಯ ಸುಮಾರು 324 ಜನರಿಗೆ ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಅವರು‌ ತಿಳಿಸಿದರು.

ತಹಶಿಲ್ದಾರ್ ಸ್ಮಿತಾರಾಮು ಅವರು ಮಾತನಾಡಿ, ತಾಲೂಕಿನ ಎಲ್ಲಾ ಇಲಾಖೆಗಳನ್ನು ಒಂದೇ ಸೂರಿನಡಿ ಸೇರಿಸಿ ಜನಸಾಮಾನ್ಯರ ಬಳಿಗೆ ಅಧಿಕಾರಿಗಳು ಬಂದು ಸಮಸ್ಯೆ ಪರಿಹರಿಸುವ ಶಾಸಕರ ವಿನೂತನ ‌ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ನೆಟ್ಲ ಮುಡ್ನೂರು ಗ್ರಾಮಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ವಹಿಸಿದ್ದರು.

ಅನಂತಾಡಿ ಗ್ರಾ.ಪಂ. ಗಣೇಶ್ ಪೂಜಾರಿ,ಮಾಣಿ ಗ್ರಾ.ಪಂ.ಅಧ್ಯಕ್ಷ ಬಾಲಕೃಷ್ಣ ಆಳ್ವ, ವೀರಕಂಭ ಗ್ರಾ.ಪಂ.ಅಧ್ಯಕ್ಷ ದಿನೇಶ್, ಹಿಂದುಳಿದ ವರ್ಗಗಳ ಅಧಿಕಾರಿ ಬಿಂದಿಯಾ, ಕೆ.ಎಸ್.ಆರ್.ಟಿ.ಸಿ.ಡಿಪೋ ಮ್ಯಾನೇಜರ್ ಶ್ರೀಸ ಭಟ್, ತಾಲೂಕು ಆರೋಗ್ಯ ಅಧಿಕಾರಿ ಅಶೋಕ್ , ಜಿ.ಪಂ.ಇಂಜಿನಿಯರ್ ತಾರಾನಾಥ, ಪಿ.ಡಬ್ಲ್ಯೂ ಡಿ.ಇಲಾಖೆ ಇಂಜಿನಿಯರ್ ಜಯಪ್ರಕಾಶ್, ಅರಣ್ಯ ಇಲಾಖೆಯ ಅಧಿಕಾರಿ ರಾಜೇಶ್ ಬಳಿಗಾರ್, ಪಶುಸಂಗೋಪನೆ ಇಲಾಖೆ ಯ ವೈದ್ಯ ಅಧಿಕಾರಿ ಅವಿನಾಶ್, ವಿಟ್ಲ ಸಿ.ಡಿ.ಪಿ.ಒ. ಉಷಾ, ಕಾರ್ಮಿಕ ಇಲಾಖೆಯ ಅಧಿಕಾರಿ ಮರ್ಲಿನ್ ಮತ್ತಿತರರು ಉಪಸ್ಥಿತರಿದ್ದರು.

ತಾ.ಪಂ.ಇ.ಒ.ರಾಜಣ್ಣ ಸ್ವಾಗತಿಸಿದರು. ದಿನೇಶ್ ಸುವರ್ಣ ರಾಯಿ‌ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು