ಮಂಗಳೂರು: ಜನವರಿ 26, 2022ರಂದು ಮಂಗಳೂರು ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ವತಿಯಿಂದ 74ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಿಲಾಗ್ರಿಸ್ ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿಯಾಗಿರುವ ಡಯಾನ ಡಿ’ಸೋಜಾ ಧ್ವಜರೋಹಣ ನೆರವೇರಿಸಿ ತಮ್ಮ ಭಾಷಣದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮಹಾನ್ ಆದರ್ಶ, ಮೌಲ್ಯ, ಹಾಗೂ ತ್ಯಾಗಗಳ ಬಗ್ಗೆ ತಿಳಿಸುತ್ತಾ ಯುವಕರು ದೇಶ ಭಕ್ತಿಯ ಜೊತೆಗೆ ದೇಶದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ವಂದ. ಗುರುಗಳಾದ ಮೈಕಲ್ ಸಾಂತೂಮಾಮಾಯೋರ್ ಅಧ್ಯಕ್ಷ ತೆಯನ್ನು ವಹಿಸಿದರು. ಮಿಲಾಗ್ರಿಸ್ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಸ್ಟ್ಯಾನಿ ಬ್ಯಾರೆಟ್ಟೊ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೆಲ್ವಿನ್ ವಾಸ್, ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ವಂದ ಗುರು. ಉದಯ ಫೆರ್ನಾಂಡಿಸ್, ಎನ್ ಸಿ ಸಿ ವಿಭಾಗ ಸಂಯೋಜಕರಾದ ಡೆನ್ಜಿಲ್ ಪಿಂಟೋ, ವಿದ್ಯಾರ್ಥಿ ಪ್ರತಿನಿಧಿ ಅಶ್ವಿನ್ ಒರ್ನೆಲೋ, ಈ ಕಾರ್ಯಕ್ರಮದ ಸಂಯೋಜಕರಾದ ಜೋನ್ ಫೆರ್ನಾಂಡಿಸ್ ಇವರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅಂಜುಮ್ ಸ್ವಾಗತಿಸಿ, ವಿದ್ಯಾರ್ಥಿ ನಿಕ್ಸನ್ ವಾಸ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಹನ್ನಾ
ವಂದಿಸಿದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…