ಮಂಗಳೂರು:ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಬಳಿಯ ಪರಾರಿ ಎಂಬಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ 8ವರ್ಷದ ಮಗುವನ್ನು ಅತ್ಯಾಚಾರಗೈದು ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ರಾಜ್ ಟೈಲ್ಸ್ ಎನ್ನುವ ಇಂಟೆರ್ ಲಾಕ್ ಕಾರ್ಖಾನೆ ಆವರಣದಲ್ಲಿ ಈ ಘಟನೆ ನಡೆದಿದೆ ಜಾರ್ಖಂಡ್ ಮೂಲದ ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು ಕುಟುಂಬದ 1ಮಗು ಸಂಜೆ ವೇಳೆಗೇ ಕಾಣೆಯಾಗಿತ್ತು ಕಾರ್ಮಿಕರು ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಸಂಜೆ 6ಗಂಟೆ ಸುಮಾರಿಗೆ ಅಲ್ಲಿಯೇ ಪಕ್ಕದ ಚರಂಡಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ .
ಕಂಕನಾಡಿ ಗ್ರಾಮಾಂತರ ಪೊಲೀಸರು ಆಗಮಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ ಈ ಬಗ್ಗೆ ಮಾಹಿತಿ ನೀಡಿರುವ ಪೋಲಿಸ್ ಕಮಿಷನರ್ ಶಶಿಕುಮಾರ್ ಟೈಲ್ ಫ್ಯಾಕ್ಟ್ರಿಯಲ್ಲಿ ಮೂವತ್ತ ರಷ್ಟು ಜನ ಕೆಲಸ ಮಾಡುತ್ತಾರೆ ಇಂದು ಭಾನುವಾರ ಆಗಿದ್ದರಿಂದ ಹತ್ತೊಂಬತ್ತು ಜನ ಕೆಲಸಕ್ಕೆ ಬಂದಿದ್ದರು ಸಂಜೆ ಈ ಘಟನೆ ನಡೆದಿದ್ದು ಪ್ರಕರಣ ದಾಖಲು ಮಾಡಿದ್ದೇವೆ ಹಲವರನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ ಅತ್ಯಾಚಾರ ನಡೆದಿದೆಯೇ ಎನ್ನುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ ವೈದ್ಯರು ತಪಾಸಣೆ ಬಳಿಕ ಮಾಹಿತಿ ನೀಡಲಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ
ಕೆಎಸ್ಆರ್ಟಿಸಿ ಬಸ್ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.
ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…
ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…
ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.
ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…