ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್ ಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜಕೀಯ ಬ್ಯಾನರ್ ಗಳ ನಡುವೆ ಇದೀಗ ಯುವಕನೊಬ್ಬನ ಫಸ್ಟ್ ನೈಟ್ ಬ್ಯಾನರ್ ಕೂಡ ಎದ್ದು ನಿಂತಿದೆ. ಕದ್ರಿ ಪೊಲೀಸ್ ಠಾಣೆಯ ಕಂಪೌಂಡ್ ಗೋಡೆಗೆ ತಾಗಿಕೊಂಡಂತೆ ಈ ಬ್ಯಾನರ್ ಹಾಕಲಾಗಿದೆ.
ಯುವಕನೊಬ್ಬನ ಮದುವೆಯ ಮೊದಲ ರಾತ್ರಿಯ ಸಂಭ್ರಮ ಎಂದು ಮತ್ತೊಂದು ಹೋರ್ಡಿಂಗ್ಸ್ ಹಾಕಲಾಗಿದೆ. ರಾತ್ರಿಯಿಡೀ ಹೋರಾಡಿ ಗೆದ್ದು ಬಾ ಎಂದು ಗೆಳೆಯರು ಹಾರೈಸಿ ಸರಕಾರಿ ಜಾಗದಲ್ಲಿ ದೊಡ್ಡ ಸಾಧನೆ ಎಂಬಂತೆ ಹೋರ್ಡಿಂಗ್ ಹಾಕಿದ್ದಾರೆ.
ಸರಕಾರಿ ಜಾಗದಲ್ಲಿ ಯಾವುದೇ ಅನುಮತಿ ಇಲ್ಲದೆ ತಮಗೆ ಇಷ್ಟಬಂದಂತೆ ಅಶ್ಲೀಲ ಸಂದೇಶ ಸಾರುವ, ಮುಜುಗರ ತರುವ ಜಾಹೀರಾತು ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಜೊತೆಗೆ ಮಳೆಗೆ ಚಳಿಗೆ ಕಚೇರಿಯಲ್ಲಿ ಕುಳಿತಿರುವ ಅಧಿಕಾರಿಗಳು ಮೈಚಳಿ ಬಿಟ್ಟು ಇಂತಹ ಅನಧಿಕೃತ, ಮತ್ತು ಅಶ್ಲೀಲ ಬ್ಯಾನರ್ಗಳ ವಿರುದ್ದ ದಂಡ ಅಥವಾ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರಿನ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…