News Karnataka Kannada
Friday, May 10 2024
ಮಂಗಳೂರು

ಅಸಾಧಾರಣ ಕಾರ್ಯಗಳಿಗೆ ವಿಶಾಲ ಮನಸ್ಥಿತಿ ಸಹಕಾರಿ: ಡಾ. ಬಿ. ಪಿ ಸಂಪತ್ ಕುಮಾರ್

A broad mindset contributes to extraordinary tasks: Dr. B. P Sampath Kumar
Photo Credit : News Kannada

ಉಜಿರೆ: ದೂರದೃಷ್ಟಿಯೊಂದಿಗಿನ ವಿಶಾಲ ಮನಸ್ಥಿತಿ ಮಹತ್ತರ ಕಾರ್ಯಗಳಿಗೆ ಪ್ರೇರಣೆಯಾಗುತ್ತದೆ ಎಂದು ಮೂಡಬಿದಿರೆಯ ಎಕ್ಸಲೆಂಟ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ್ ಹೇಳಿದರು.

ಎಸ್.ಡಿ.ಎಂ. ಪದವಿ ಕಾಲೇಜಿನ ಸಮ್ಯಕ್‌ದರ್ಶನ ಸಭಾಂಗಣದಲ್ಲಿ ಡಿ. ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಬುಧವಾರ ಆಯೋಜಿಸಿದ್ದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಸಾಧಾರಣ ಕೆಲಸವನ್ನು ದೂರದೃಷ್ಟಿಯೊಂದಿಗಿನ ವಿಶಾಲ ಮನಸ್ಥಿತಿಯಿಂದ ಸಾಧ್ಯವಾಗಿಸಬಹುದು. ಪ್ರಸ್ತುತ ಜಗತ್ತಿನ
ಅವಶ್ಯಕತೆಗಳಿಗೆ ವಿಶಾಲ ಮನಸ್ಥಿತಿಯಿಂದ ಪರಿಹಾರ ಮಾರ್ಗವನ್ನು ಕಂಡುಕೊಳ್ಳಬೇಕು. ಅದರಿಂದ ಮಾತ್ರ ಅಭಿವೃದ್ಧಿ ಸಾಧ್ಯ
ಎಂದರು.

ಧರ್ಮಸ್ಥಳದ ಹಿಂದಿನ ಧರ್ಮಾಧಿಕಾರಿ ಡಿ. ರತ್ನವರ್ಮ ಹೆಗ್ಗಡೆಯವರು ಸದಾ ದೂರದೃಷ್ಟಿಯಿಂದ ಯೋಜನೆಗಳನ್ನು
ರೂಪಿಸುತ್ತಿದ್ದರು. ಅವುಗಳ ಕಾರ್ಯಸಾಧನೆಗೂ ಶ್ರಮಿಸುತ್ತಿದ್ದರು. ಅವರು ಧರ್ಮಸ್ಥಳದ ಆಧುನಿಕ ಕಾಯಕಲ್ಪಕ್ಕೆ ಶ್ರಮಿಸಿದ್ದರ ಹಿಂದೆ ದೂರದೃಷ್ಟಿ ಪ್ರೇರಕವಾಗಿತ್ತು ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ ಮಾತನಾಡಿದರು. ಕೃತಜ್ಞತಾ ಭಾವದ ಕಾರ್ಯರೂಪದಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯ. ತಂದೆ ತಾಯಿಯರ ತ್ಯಾಗಕ್ಕೆ ಸದಾ ಕೃತಜ್ಞರಾಗಿರಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿದರು. ಪ್ರಸ್ತುತ ಜಗತ್ತಿನಲ್ಲಿ ಸಂವಹನ ಕಲೆ ಅತೀ ಶ್ರೇಷ್ಟವಾದದ್ದು. ಇದು ವ್ಯಕ್ತಿತ್ವ ನಿರ್ಮಾಣದ ಜೊತೆ ನಾಯಕತ್ವ ಗುಣದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸಂಯೋಜಕರಾದ ಡಾ. ನಾಗಣ್ಣ ಡಿ. ಎ. ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಡಾ. ದಿವಾಕರ ಕೊಕ್ಕಡ
ಸ್ವಾಗತಿಸಿದರು. ಇನ್ನೋರ್ವ ಸಹಾಯಕ ಪ್ರಾಧ್ಯಾಪಕ ಆರ್. ಮಹೇಶ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಪ್ರಣಮ್ಯ ಹಾಗೂ ತಂಡದವರು ಪ್ರಾರ್ಥಿಸಿದರು. ಕಾಲೇಜಿನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥರಾದ ಡಾ. ಸುಧೀರ್ ಕೆ. ವಿ. ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು