ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಸೋಮವಾರ ರಾತ್ರಿ ಕಾಡಾನೆಗಳ ಹಿಂಡು ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶ ಉಂಟಾಗಿದೆ.
ಕೋಮಲಾ ಕರುಣಾಕರ ಎಂಬವರ ತೋಟದ 100ಕ್ಕಿಂತ ಅಧಿಕ ಅಡಕೆ ಮರ, ಗಿರೀಶನ್ ಎಂಬವರ ತೋಟದ 25 ಅಡಕೆ ಮರಗಳನ್ನು ಧ್ವಂಸ ಮಾಡಿವೆ. ದಾಳಿ ನಡೆಸಿದ ಕಾಡಾನೆಗಳ ಹಿಂಡಿನಲ್ಲಿ ಮರಿಯಾನೆ ಸಹಿತ ನಾಲ್ಕಕ್ಕಿಂತ ಅಧಿಕ ಆನೆಗಳು ಇರುವ ಶಂಕೆ ವ್ಯಕ್ತವಾಗಿದೆ.
ಅರಣ್ಯ ಇಲಾಖೆಯ ಚಾರ್ಮಾಡಿ ಉಪ ವಿಭಾಗದ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ,ಕೃಷಿ ನಷ್ಟ ಬಗ್ಗೆ ಸರಕಾರದಿಂದ ಸಿಗುವ ಪರಿಹಾರ ಮಂಜೂರಾತಿಗೆ ಅಗತ್ಯ ಮಾಹಿತಿಯನ್ನು ನೀಡಿದ್ದಾರೆ.
ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ…
ಒಂದು ದೇಹ ಎರು ಜೀವ ಎಂಬಂತೆ ಮಹಿಳೆಯೊಬ್ಬರು ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿರುವ ಸಯಾಮಿ…
ಕೋವಿಶೀಲ್ಡ್ ಅಡ್ಡಪರಿಣಾಮದ ಸುದ್ದಿ ಹಸಿರಾಗಿರುವಂತೆಯೇ ಇತ್ತ ಭಾರತದಲ್ಲಿ ವ್ಯಾಪಕವಾಗಿ ನೀಡಲಾಗಿದ್ದ ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆಯಿಂದಲೂ ಅಡ್ಡ ಪರಿಣಾಮಗಳು ಇವೆ…
ಹಾವುಗಳ ರಕ್ಷಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಾಯವಾಣಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಡಿಐಪಿಆರ್ ಕರ್ನಾಟಕ ಎಕ್ಸ್ ಖಾತೆಯಲ್ಲಿ…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
75 ವರ್ಷಕ್ಕೆ ಸಕ್ರಿಯ ರಾಜಕಾರಣದಿಂದ ಬಿಜೆಪಿಯ ಅನೇಕ ಮುಖಂಡರಿಗೆ ನಿವೃತ್ತಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಂದಿನ ವರ್ಷ 75 ತುಂಬುತ್ತದೆ.…