News Karnataka Kannada
Monday, May 13 2024
ಮಂಗಳೂರು

ಸುರತ್ಕಲ್: ಫೈನಾನ್ಸ್ ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ

Sura
Photo Credit : News Kannada

ಸುರತ್ಕಲ್: ಫೈನಾನ್ಸ್ ಕೆಲಸಕ್ಕೆ ತೆರಳಿದ್ದ ಯುವತಿಯೋರ್ವಳು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರ:
ಕಮಲಾಕ್ಷ ಎಂಬವರ ಪುತ್ರಿ ಶಿವಾನಿ(20) ಮಂಗಳೂರಿನ ಮಣಪ್ಪುರಂ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದು ದಿನಾಂಕ 16ರಂದು ಬೆಳಿಗ್ಗೆ 7 ಗಂಟೆಗೆ ಕೆಲಸಕ್ಕೆ ತೆರಳಿದ್ದು ಈತನಕ ಮನೆಗೆ ಬಾರದೇ ಇದ್ದು ಆಕೆಯ ಬಗ್ಗೆ ಫೈನಾನ್ಸ್ ನಲ್ಲಿ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದ್ದರೂ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಸುರತ್ಕಲ್ ಠಾಣೆಗೆ ದೂರಲಾಗಿದೆ.

5.6 ಇಂಚು ಎತ್ತರ, ಬಿಳಿ ಮೈಬಣ್ಣ, ದಪ್ಪ ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು ತುಳು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ತೆರಳುವಾಗ ಹಸಿರು ಬಣ್ಣದ ಟಾಪ್ ಹಾಗೂ ಗೋಲ್ಡನ್ ಕಲರ್ ಪ್ಯಾಂಟ್ ಧರಿಸಿರುತ್ತಾರೆ. ಕಾಣೆಯಾದ ಶಿವಾನಿ ಬಗ್ಗೆ ಮಾಹಿತಿ ಇದ್ದಲ್ಲಿ ಸುರತ್ಕಲ್ ಠಾಣೆ- 0824-2220540, ಅಥವಾ ಪೊಲೀಸ್ ಅಧಿಕಾರಿಗಳನ್ನು (9480805360, 9480802345) ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ 0824-2220800ಗೆ ಕರೆ ಮಾಡಬೇಕಾಗಿ ಸುರತ್ಕಲ್ ಪೊಲೀಸರು ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು