ಮಂಗಳೂರು: ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ ಕಾರ್ಯಕ್ರಮ ನವೆಂಬರ್ 1ರ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಪಂಪೆವೆಲ್ ನಿಂದ ಪಾದಯಾತ್ರೆ ಆರಂಭಗೊಂಡು 4.30ಕ್ಕೆ ಕಛೇರಿಯ ಉದ್ಘಾಟನೆ ಮಂಗಳೂರು ಬಲ್ಮಠದ ಸೋಜಾ ಆರ್ಕೇಡ್ ನಲ್ಲಿ ನಡೆಯಲಿದೆ. 5.15ಕ್ಕೆ ಡಾನ್ ಬಾಸ್ಕೋ ಹಾಲಿನಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಆಮ್ ಆದ್ಮಿ ಪಾರ್ಟಿಯ ಹಿತೈಷಿ ಮೈಕಲ್ ಡಿಸೋಜಾ ನೆರವೇರಿಸಲಿದ್ದಾರೆ. ಎಎಪಿ ಕರ್ನಾಟಕದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಎಎಪಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಎಎಪಿ ಕರ್ನಾಟಕದ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ, ರಾಜ್ಯ ಜಂಟಿ ಕಾರ್ಯದರ್ಶಿ ಮತ್ತು ಕರಾವಳಿ ವಲಯದ ಸಂಯೋಜಕ ವಿವೇಕಾನಂದ ಸಾಲಿನ್ಸ್ ಉಪಸ್ಥಿತರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ- 7587097485