ಮಂಗಳೂರು: ಕಡಬ ತಾ| ಸರ್ಕಾರಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣ ಸಂಬಂಧ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆ್ಯಸಿಡ್ ದಾಳಿ ಸಂಬಂಧ ಮಾರ್ಚ್.5 ರಂದು ಪ್ರಮುಖ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಕೇರಳದ ಇನ್ನಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಆರೋಪಿ ಜೊತೆ ಕೇರಳಕ್ಕೆ ತೆರಳಿತ್ತು. ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮತ್ತೂರಿನ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಲಾಗಿತ್ತು. ಸದ್ಯ ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಕಡಬಕ್ಕೆ ಕರೆತಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಆರೋಪಿ ಅಭಿನ್ಗೆ ಆ್ಯಸಿಡ್ ತಂದುಕೊಟ್ಟ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ಸನ್ನು ಹೊಲಿದುಕೊಟ್ಟ ವ್ಯಕ್ತಿಯನ್ನೂ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಆನ್ಲೈನ್ ಮೂಲಕ ಆ್ಯಸಿಡ್ ಖರೀದಿಸಿದ್ದ ಎಂಬ ಅಂಶ ಪತ್ತೆಯಾಗಿದೆ.
ಆ್ಯಸಿಡ್ ದಾಳಿ ಸಂತ್ರಸ್ತ ಮೂವರು ವಿದ್ಯಾರ್ಥಿನಿಯರಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಮತ್ತು ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತಿದೆ.
ಸಂತ್ರಸ್ಥ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಬೇಕಾಗಿದ್ದು ಈ ಬಗ್ಗೆ ಶಿಕ್ಷಣ ಸಚಿವರ ಜೊತೆ ಮಾತನಾಡಿ ಅವರ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಹೇಳಿದ್ದಾರೆ
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…