ಮಂಗಳೂರು: ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಅವರು ಭೂಗತ ಪಾತಕಿಗಳಿಂದ ಜೀವ ಬೆದರಿಕೆ ಎದುರಿಸುತ್ತಿದ್ದು, ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಬುಧವಾರ ಭೇಟಿಯಾಗಿ ಈ ಬೆಳವಣಿಗೆ ಬಗ್ಗೆ ಮಾಹಿತಿ ಹಂಚಿಕೊಂಡರು.
ಸುದ್ದಿಗಾರರ ಜೊತೆ ಮಾತನಾಡಿದ ಶಶಿಕುಮಾರ್, ತನಗೆ ಜೀವ ಬೆದರಿಕೆ ಇದೆ ಎಂದು ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಗೃಹಸಚಿವರ ಬಳಿ ಹೋಗಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆ, ಎಡಿಜಿಪಿಯವರು ನಮಗೆ ಮಾಹಿತಿ ನೀಡಿದ್ದರು. ಆದರೆ ಅವರು ಕೊಟ್ಟ ಮನವಿಯಲ್ಲಿ ನಿರ್ದಿಷ್ಟ ಮಾಹಿತಿ ಇರಲಿಲ್ಲ. ಯಾರಿಂದ ಬೆದರಿಕೆ ಇದೆ, ಯಾತಕ್ಕಾಗಿ ಬೆದರಿಕೆ ಇದೆ ಎಂದು ಹೇಳಿರಲಿಲ್ಲ. ಆದರೆ ಅವರ ರಿಲೈಬಲ್ ಸೋರ್ಸ್ ಮೂಲಕ ಬಂದ ಮಾಹಿತಿಯಂತೆ ಅವರು ದೂರು ಕೊಟ್ಟಿದ್ದರು. ಅವರು ಯಾರೂಂತ ಪತ್ತೆ ಹಚ್ಚಬೇಕು, ರಕ್ಷಣೆ ಕೊಡಿ ಎಂದು ಮನವಿ ಮಾಡಿದ್ದರು.
ಹೀಗಾಗಿ ಅವರನ್ನು ಹೆಚ್ಚಿನ ಮಾಹಿತಿಗಾಗಿ ವಿಚಾರಣೆಗೆ ಕರೆದಿದ್ದೀವಿ ಎಂದು ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.