ಮಂಗಳೂರು: ಮಂಗಳೂರು ನಗರವು ದೇಶದ ಇತರೆ ನಗರಗಳಿಂತ ಭಿನ್ನವಾಗಿ ಸ್ಮಾರ್ಟ್ ನಗರವಾಗಿ ಬೆಳೆಯುತಿದ್ದು, ಅದಕ್ಕೆ ಪೂರಕವಾಗಿ ಯೋಜನೆಗಳನ್ನು ರೂಪಿಸುವ ಮೂಲಕ ಮಾದರಿ ನಗರವಾಗಿ ಗುರುತಿಸುವಂತೆ ಮಾಡುವ ಗುರಿಯಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಹೈೂಗೆ ಬಜಾರ್ ವಾರ್ಡಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ 8.10 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮಂಗಳೂರಿನ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕಾರ್ಯ ನಿರ್ವಹಿಸುತಿದ್ದು, ರಾಜಕೀಯ ರಹಿತವಾಗಿ ನಗರದ ಉನ್ನತೀಕರಣಕ್ಕೆ ಶ್ರಮಿಸಲಾಗುತ್ತಿದೆ. ಮೂಲಭೂತ ಸೌಕರ್ಯಗಳ ಜೊತೆಯಲ್ಲಿ ಜನೋಪಯೋಗಿ ಯೋಜನೆಗಳನ್ನೂ ನೀಡುವ ಕೆಲಸವನ್ನೂ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯಡಿ 4 ಕೋಟಿ ವೆಚ್ಚದಲ್ಲಿ ಬೋಳಾರ ಪೋಸ್ಟ್ ಆಫೀಸಿನಿಂದ ಮುಳಿಹಿತ್ಲು ಕಲ್ಲುರ್ಟಿ ದೈವಸ್ಥಾನದ ವರೆಗಿನ ರಸ್ತೆ, 3 ಕೋಟಿ ರೂಪಾಯಿ ವೆಚ್ಚದಲ್ಲಿ ಮುಳಿಹಿತ್ಲು ಕ್ರಾಸ್ ರೋಡಿನಿಂದ ಜ್ಯೋತಿ ಗ್ಯಾರೇಜ್ ಸಂಪರ್ಕಿಸುವ ರಸ್ತೆ ಹಾಗೂ 1.10 ಕೋಟಿ ರೂಪಾಯಿ ವೆಚ್ಚದಲ್ಲಿ ಬೋಳಾರ ಫೆರಿ ರಸ್ತೆಯಿಂದ ಪ್ರಕಾಶ್ ಗ್ಯಾರೇಜ್ ತನಕ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಪಾಲಿಕೆ ಮುಖ್ಯ ಸಚೇತಕರಾದ ಪ್ರೇಮಾನಂದ ಶೆಟ್ಟಿ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಪಾಲಿಕೆ ಸದಸ್ಯರು ಹಾಗೂ ಸ್ಮಾರ್ಟ್ ಸಿಟಿ ನಿರ್ದೇಶಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸದಸ್ಯರಾದ ರೇವತಿ ಶೆಟ್ಟಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ದೀಪಕ್ ಪೈ, ನಿತಿನ್ ಕುಮಾರ್, ವಿನೋದ್ ಮೆಂಡನ್, ಉಮಾನಾಥ್, ವಿನೋದ್ ಮೆಂಡನ್, ಅಶೋಕ್ ಕುಮಾರ್, ಹೇಮ, ಗಿರೀಶ್, ಅಮಿತ್, ಗುರುಪ್ರಸಾದ್, ವಸಂತ್ ಜೆ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.