ಪುತ್ತೂರು: ಪುತ್ತೂರಿನಲ್ಲಿ ಅಕ್ಷಯ್ ಕಲ್ಲೇಗ ಮರ್ಡರ್ ಗೆ ರಿವೇಂಜ್- ಬೆದರಿಕೆ ಕರೆ ಬಂದಿದೆ. ಕಲ್ಲೇಗ ಮರ್ಡರ್ ಪ್ರತಿಕಾರಕ್ಕೆ ಹುನ್ನಾರ ನಡೆಸಿದ್ದಾರೆ. ಅಕ್ಷಯ್ ಕಲ್ಲೇಗ ಕೊಲೆ ಆರೋಪಿ ಮನೀಶ್ ಸಹೋದರ ಮನೋಜ್ ಗೆ ಸ್ಕೆಚ್ ಹಾಕಲಾಗಿದೆ. ಬೆದರಿಕೆ ಕರೆ ಬಗ್ಗೆ ಪುತ್ತೂರು ನಗರ ಠಾಣೆಗೆ ಮನೋಜ್ ದೂರು ನೀಡಿದ್ದಾರೆ. ಹೀಗಾಗಿ ಪುತ್ತೂರಿನಲ್ಲಿ ನಡೆಯಲಿದ್ದ ಕೃತ್ಯವನ್ನ ಸದ್ಯ ಪೊಲೀಸರು ತಡೆದಿದ್ದಾರೆ. ಬಂಟ್ವಾಳ ನಿವಾಸಿ ಕಿಶೋರ್ ಕಲ್ಲಡ್ಕ (36), ಪುತ್ತೂರಿನ ಮನೋಜ್ (23), ಆಶಿಕ್ (28), ಸನತ್ ಕುಮಾರ್ (24) ಅಕ್ಷಯ್ ಕಲ್ಲೇಗ ಮರ್ಡರ್ ಗೆ ರಿವೇಂಜ್- ಬೆದರಿಕೆ ಕರೆ ಹಾಕಿದ ಆರೋಪಿಗಳು. ಇವರನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಿನ್ನ ತಮ್ಮ ಮನೀಶ್ ಹಾಗೂ ಉಳಿದ ಆರೋಪಿಗಳು ಜೈಲಿನಿದ್ದಾರೆ. ಆದ್ರೆ ನಿನ್ನನ್ನ ಬಿಡಲ್ಲ ಎಂದು ಆರೋಪಿ ಮನೀಶ್ ಸಹೋದರ ಮನೋಜ್ ಗೆ ಫೋನ್ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಅಲ್ಲದೇ, ಮನೋಜ್ ಚಲನವಲನವನ್ನ ದುಷ್ಕರ್ಮಿಗಳ ತಂಡ ಗಮನಿಸುತಿತ್ತು. ಪುತ್ತೂರಿನ ಮುಕ್ರಂಪಾಡಿಯಲ್ಲಿ ನಾಲ್ವರು ದುಷ್ಕರ್ಮಿಗಳ ತಂಡ ತಲ್ವಾರ್ ಸಹಿತ ಕಾರಿನಲ್ಲಿ ಅವಿತ್ತಿತ್ತು. ಸದ್ಯ ನಾಲ್ವರನ್ನ ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.