ಬೆಳ್ತಂಗಡಿ: ಬಡಗಕಾರಂದೂರು ಗ್ರಾಮದ ಅಳದಂಗಡಿ ಸುಂಕದಕಟ್ಟೆಯಲ್ಲಿ ಗುರುವಾರ ರಾತ್ರಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ-ನಗದನ್ನು ಕಳವುಗೈದಿರುವ ಬಗ್ಗೆ ಸೆ. ೨೩ರಂದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಂಕದಕಟ್ಟೆಯ ನಿವಾಸಿ ಫೌಜಿಯಾ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಫೌಜಿಯಾ ಅವರು ರಾತ್ರಿ ಹತ್ತಿರದ ಸಹೋದರನ ಮನೆಗೆ ಹೋಗಿದ್ದು, ಬೆಳಿಗ್ಗೆ ಮನೆಗೆ ಬಂದು ಗಮನಿಸಿದಾಗ ಬಾಗಲಿನ ಚಿಲಕ ಮುರಿದಿರುವುದು ಕಂಡು ಬಂದಿದೆ. ಕಳ್ಳರು ಬೀಗ ಮುರಿದು ಮನೆಯ ಬೆಡ್ ರೂಂನಲ್ಲಿದ್ದ ಗೋದ್ರೇಜ್ ಕಪಾಟನ್ನು ತೆರದು ಅದರಲ್ಲಿದ್ದ ಸುಮಾರು ಎರಡೂವರೆ ಪವನ್ ತೂಕದ ೨ ಚಿನ್ನದ ಸರ, ೧ ಪವನ್ ತೂಕದ ೨ ಜತೆ ಕಿವಿಯೋಲೆಗಳು, ಸುಮಾರು ಎರಡೂವರೆ ಪವನ್ ತೂಕದ ೨ ಬ್ರಾಸ್ಲೈಟ್ ಸೇರಿದಂತೆ ರೂ. ೨೫ ಸಾವಿರ ನಗದನು ದೋಚಿದ್ದಾರೆ.
ನಗ-ನಗದು ಸೇರಿದಂತೆ ಕಳವಾದ ಒಟ್ಟು ಮೌಲ್ಯ ರೂ. ೨,೯೭,೦೦೦ ಲಕ್ಷ ಎಂದು ಅಂದಾಜಿಸಲಾಗಿದ್ದು, ವೇಣೂರು ಪೊಲೀಸ್ ಉಪ ನಿರೀಕ್ಷಕಿ ಸೌಮ್ಯ ಜೆ. ಹಾಗೂ ಸಿಬ್ಬಂದಿ ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…