ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವರ ಬ್ರಹ್ಮಕಲಶೋತ್ಸವದ 3 ನೇ ದಿನದ ಧಾರ್ಮಿಕ ಸಭೆಯಲ್ಲಿ ಧರ್ಮಸ್ಥಳ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಿದರು. “ಮಕ್ಕಳಲ್ಲಿ ಎಳವೆಯಿಂದಲೇ ಸನಾತನ ಧರ್ಮ ಅರಿವನ್ನು ಮೂಡಿಸಬೇಕು. ಬದುಕಿನಲ್ಲಿ ಋಣಾತ್ಮಕ ಚಿಂತನೆಗಳನ್ನು ದೂರವಿರಿಸಿ ಉದಾತ್ತ ಸತ್ಯಗಳೊಂದಿಗೆ ನಮ್ಮ ಸಂಬಂಧ ಗಟ್ಟಿಗೊಳಿಸಬೇಕು. ಆಗ ಪ್ರೀತಿ, ವಿಶ್ವಾಸ, ಶಾಂತಿ, ನೆಮ್ಮದಿ ಸಿಗುತ್ತದೆ. ಶ್ರದ್ಧಾ ಕೇಂದ್ರ, ವಿದ್ಯಾ ಕೇಂದ್ರಗಳ ಪುನರುತ್ಥಾನದಿಂದ ಜನಕಲ್ಯಾಣ ಸಾಧ್ಯ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್, ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ತಜ್ಞ ಡಾ. ಸದಾನಂದ ಪೂಜಾರಿ, ತುಳು ಶಿವಳ್ಳಿ ಸಭಾದ ಜಿಲ್ಲಾಧ್ಯಕ್ಷ ಡಾ. ಎಂ.ಎಂ ದಯಾಕರ್, ಉದ್ಯಮಿಗಳಾದ ವಿನೋದ್ ದೇವಾಡಿಗ ಅಳದಂಗಡಿ, ದೇವದಾಸ್ ಶೆಟ್ಟಿ ಬದ್ಯಾರು, ಚಂದ್ರಹಾಸ ದೇವಾಡಿಗ, ಅಳದಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಕೊಡಂಗೆ, ಉಪಾಧ್ಯಕ್ಷ ಹರೀಶ್ ಆಚಾರ್ಯ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಶಶಿಧರ ಡೋಂಗ್ರೆ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ ಉಪಸ್ಥಿತರಿದ್ದರು.
ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಚಂದ್ರಹಾಸ ದೇವಾಡಿಗ, ದೇವದಾಸ್ ಶೆಟ್ಟಿ, ವಿನೋದ್ ದೇವಾಡಿಗ, ದಿಲೀಪ್ ಚಕ್ರವರ್ತಿ, ಬೇಬಿ ಪೂಜಾರಿ ಪುಣ್ಕೆತ್ಯಾರು, ಜಯಾನಂದ ಕೊರಲ್ಲ ಅವರನ್ನು ಸನ್ಮಾನಿಸಲಾಯಿತು.
ಆರ್ಥಿಕ ಸಮಿತಿ ಸಂಚಾಲಕ ಸೋಮನಾಥ ಬಂಗೇರ ವರ್ಪಾಳೆ ಸ್ವಾಗತಿಸಿದರು. ಕಾರ್ಯದರ್ಶಿ ವಿಜಯ್ ಕುಮಾರ್ ಜೈನ್ ನಿರೂಪಿಸಿದರು.