ಮಂಗಳೂರು: ಬಿಜೆಪಿ ಚುನಾವಣೆ ಪ್ರಚಾರದ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಶನಿವಾರ ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಿಂದ ಆರಂಭಗೊಂಡ ರೋಡ್ ಶೋ ಕೆ.ಎಸ್. ರಾವ್ ರಸ್ತೆ ಮುಖಾಂತರ ಸಾಗಿ ಮಂಜೇಶ್ವರ ಗೋವಿಂದ ಪೈ ನವಭಾರತ್ ಸರ್ಕಲ್ ವರೆಗೆ ನಡೆಯಿತು.
6.45ಕ್ಕೆ ಆರಂಭಗೊಂಡ ರೋಡ್ ಶೋ ನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕ್ಷೇತ್ರ ಅಭ್ಯರ್ಥಿ ವೇದವ್ಯಾಸ ಕಾಮತ್ , ಜಿಲ್ಲಾಧ್ಯಕ್ಷ ಸುದರ್ಶನ್ ಮೊದಲಾದವರು ಪಾಲ್ಗೊಂಡಿದ್ದರು.
ಚುನಾವಣೆ ಕುರಿತು ಚರ್ಚೆ: ರೋಡ್ ಶೋ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡರೊಂದಿಗೆ ಚುನಾವಣಾ ತಂತ್ರಗಳ ಕುರಿತು ಹೋಟೆಲ್ ಓಷನ್ ಪರ್ಲ್ ನಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರೊಂದಿಗೆ ಅಮಿತ್ ಶಾ ಚರ್ಚೆ ನಡೆಸುತ್ತಿದ್ದಾರೆ.