ಪುತ್ತೂರು: ಯುವತಿಯೋರ್ವಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವಕನೋರ್ವ ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆ ಯತ್ನ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಯುವತಿಯನ್ನುಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಯುವಕನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಯುವತಿಯನ್ನು ಅಳಿಕೆ ಮೂಲದ ಗೌರಿ (20 ವ.) ಎಂದು ಗುರುತಿಸಲಾಗಿದೆ. ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.