ಮಂಗಳೂರು: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಚೊಂಬು ಜಾಹೀರಾತಿಗೆ ಅಣ್ಣಾಮಲೈ ಪುತ್ತೂರಿನ ರೋಡ್ ಶೊನಲ್ಲಿ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ನವರಿಂದ ರಾಜ್ಯದಲ್ಲಿ ಚೊಂಬು ಪ್ರದರ್ಶನ ನಡೀತಾ ಇದೆ. ಕೇಂದ್ರ ಸರ್ಕಾರ ದೇಶದಲ್ಲಿ 11 ಕೋಟಿ ಟಾಯ್ಲೆಟ್ ನಿರ್ಮಿಸಿಕೊಟ್ಟಿದೆ. ಆದ್ರೆ ಕಾಂಗ್ರೆಸ್ ನವರು ಈಗಲೂ ಚೊಂಬು ಹಿಡಿದು ಯಾಕೆ ಹೋಗುತ್ತಿದ್ದಾರೆಂದು ಅರ್ಥವಾಗುತ್ತಿಲ್ಲ. ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳನ್ನು ಘೋಷಿಸುತ್ತಿದೆ.
ಆದ್ರೆ ಕಾಂಗ್ರೆಸ್ ಪಕ್ಷಕ್ಕೇ ವ್ಯಾರಂಟಿ ಇಲ್ಲ. ವ್ಯಾರಂಟಿ ಇಲ್ಲದೆ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಘೋಷಿಸುತ್ತಿದೆ. ಮೋದಿಯ ಗ್ಯಾರಂಟಿಯ ಮುಂದೆ ಯಾವ ಗ್ಯಾರಂಟಿಯೂ ಇಲ್ಲ. ಮುಂದಿನ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ನವರು ಹಲವು ನಾಟಕಗಳನ್ನ ಮಾಡಲಿದ್ದಾರೆ.
ಆ ಕಾರಣ ನಾವೆಲ್ಲ ಜಾಗ್ರತೆಯಿಂದ ಇರಬೇಕು ಎಂದು ಪುತ್ತೂರಿನಲ್ಲಿ ಕಾಂಗ್ರೆಸ್ ವಿರುದ್ಧ ಕೆ.ಅಣ್ಣಾಮಲೈ ವಾಗ್ದಾಳಿ ನಡೆಸಿದರು.