News Karnataka Kannada
Monday, May 06 2024
ಮಂಗಳೂರು

ಮಂಗಳೂರು: ಮಳಲಿ ಮಸೀದಿಯ ಪ್ರಕರಣ- ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ

Appeal against Mangaluru court's verdict - Dakshina Kannada District Waqf Advisory Committee
Photo Credit : News Kannada

ಮಂಗಳೂರು: ಮಳಲಿಪೇಟೆ ಮಸೀದಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂರನೇ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯವು ಬುಧವಾರ ನೀಡಿದ ತೀರ್ಪಿನ ವಿರುದ್ಧ ರಾಜ್ಯ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಕ್ಫ್ ಕಾಯಿದೆ ಪ್ರಕಾರ ಸಂಬಂಧಿಸಿದ ಯಾವುದೇ ವಿವಾದ ವಿಚಾರ ಸಮಸ್ಯೆ ಅಥವಾ ಇತರ ಸಂಗತಿಗಳ ಬಗ್ಗೆ ಸಿವಿಲ್ ಕಂದಾಯ ನ್ಯಾಯಾಲಯ ಮತ್ತಿತರ ಪ್ರಾಧಿಕಾರದಲ್ಲಿ ಯಾವುದೇ ದಾವೆ ಹೂಡುವಂತಿಲ್ಲ , ಕಲಾಪ ನಡೆಸುವಂತಿಲ್ಲ ಅದರಂತೆ ಮಳಲಿ ಮಸೀದಿ ವಿಚಾರಕ್ಕೆ ಸಂಬಂಧಿಸಿ ಸ್ಥಳೀಯರು ಮೂರನೇ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಮೊರೆ ಹೋದಾಗ ಮಸೀದಿಯ ಪರ ವಕೀಲರು ಇದನ್ನು ಪ್ರಶ್ನಿಸಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದರು ಆದರೆ ಬುಧವಾರ ಮಂಗಳೂರು ನ್ಯಾಯಾಲಯವು ಆಸ್ತಿಯ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯ ವಿಚಾರಣೆ ನಡೆಸಬಹುದು ಎಂದು ತಿಳಿಸಿದೆ. ಹಾಗಾಗಿ ಈ ಬಗ್ಗೆ ಕಾನೂನು ತಜ್ಞರ ಸಲಹೆಯನ್ನು ಪಡೆದು ಮತ್ತು ರಾಜ್ಯ ವಕ್ಫ್ ಬೋರ್ಡ್ ನ ಜೊತೆ ಚರ್ಚೆ ನಡೆಸಿ ಹಿಂದಿನ ತೀರ್ಪನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ಮಳಲಿ ಮಸೀದಿಗೆ ಸಂಬಂಧಿಸಿ ಮಂಗಳೂರು ಮೂರನೇ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯವು ಬುಧವಾರ ನೀಡಿದ ತೀರ್ಪಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲಮಯ ಸಂದೇಶಗಳು ಹರಿದಾಡುತ್ತಿವೆ . ಸುದ್ದಿಗೆ ಸಂಬಂಧಿಸಿದ ಪ್ರಕರಣವನ್ನು ಸಿವಿಲ್ ನ್ಯಾಯಾಲಯದಲ್ಲಿ ಕಲಾಪ ನಡೆಸಬಹುದು ಇಲ್ಲವೇ ಎಂಬುದರ ಬಗ್ಗೆ ಮಾತ್ರ ನ್ಯಾಯಾಲಯ ತೀರ್ಪು ನೀಡಿದೆ ಅದರ ಹೊರತು ಬೇರೆ ಯಾವ ತೀರ್ಪು ನೀಡಿಲ್ಲ . ಮಳಲಿ ಮಸೀದಿಗೆ ಸುಮಾರು ಐನೂರು ವರ್ಷಗಳ ಇತಿಹಾಸವಿದೆ. 2ಸಾವಿರದ 3ರಲ್ಲಿ ವಕ್ಫ್ ಬೋರ್ಡ್ ನಲ್ಲಿ ಈ ಮಸೀದಿ ನೊಂದಾಯಿಸ ನೊಂದಾವಣಿ ಆಗಿದೆ ಹಾಗಾಗಿ ಇಂದಿನ ತೀರ್ಪು ವಿರುದ್ಧ ಹೋರಾಟ ಮಾಡಲಿದ್ದೇವೆ ನಮಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ತಿಳಿಸಿದ್ದಾರೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು