Categories: ಮಂಗಳೂರು

ಕಾಂಗ್ರೆಸ್ ಮೈತ್ರಿ ಕೂಟದ ತುಷ್ಟೀಕರಣ ದೇಶಕ್ಕೆ ಮಾರಕ : ಶಾಸಕ ಕಾಮತ್ ಕಿಡಿ

ಮಂಗಳೂರು:  ದೇಶವನ್ನು ಒಗ್ಗೂಡಿಸುವ ಕೆಲಸ ಬಿಜೆಪಿ ಮಾಡಿದರೆ, ಕಾಂಗ್ರೆಸ್ ಎಂದಿನಂತೆ ತನ್ನ ಸ್ವಾರ್ಥಕ್ಕಾಗಿ ದೇಶವನ್ನು ಛಿದ್ರಗೊಳಿಸುವ ಕೆಲಸವನ್ನು ಮುಂದುವರಿಸಿದೆ. ಬಿಹಾರ ರಾಜ್ಯದಲ್ಲಿ ಸಾರ್ವಜನಿಕ ರಜೆಗಳ ವಿಷಯದಲ್ಲಿ ಉಂಟಾಗಿರುವ ವಿವಾದವು I.N.D.I.A ಮೈತ್ರಿ ಕೂಟದ ಜಿಹಾದಿ ಮನಸ್ಥಿತಿಯನ್ನು ಜಗತ್ತಿಗೆ ತೋರಿಸುತ್ತಿದೆ ಎಂದು ಶಾಸಕ ವೇದವ್ಯಾಸ್‌ ಕಾಮತ್‌ ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರದ ಶಿಕ್ಷಣ ಇಲಾಖೆ ಹೊರಡಿಸಿರುವ 2024ರ ಸಾರ್ವಜನಿಕ ರಜೆಗಳ ಪಟ್ಟಿಯಲ್ಲಿ ಹಿಂದೂಗಳ ಶ್ರೀ ಕೃಷ್ಣಜನ್ಮಾಷ್ಟಮಿ, ರಕ್ಷಾ ಬಂಧನ, ರಾಮನವಮಿ, ಶಿವರಾತ್ರಿ, ವಸಂತ ಪಂಚಮಿ, ಜೀವಿತ ಪುತ್ರಿಕಾ, ಹಬ್ಬಗಳಿಗೆ ನೀಡಲಾಗುತ್ತಿದ್ದ ರಜೆಯನ್ನು ರದ್ದುಗೊಳಿಸಿ, ಇಸ್ಲಾಂ ಹಬ್ಬಗಳಿಗೆ ಹೆಚ್ಚುವರಿ ರಜೆ ಘೋಷಿಸಲಾಗಿದೆ. ಮುಂದುವರಿದು ಉರ್ದು ಶಾಲೆಗಳು ಸೇರಿದಂತೆ ಮುಸ್ಲಿಂ ಪ್ರಾಬಲ್ಯವಿರುವ ಯಾವುದೇ ಸರ್ಕಾರಿ ಶಾಲೆಗಳಿಗೆ ಭಾನುವಾರದ ಬದಲು ಶುಕ್ರವಾರದಂದು ವಾರದ ರಜೆ ಘೋಷಿಸಲಾಗಿದೆ. ಆ ಮೂಲಕ ಮುಸ್ಲಿಮರಿಗಾಗಿ ಸರ್ಕಾರಿ ವಾರದ ರಜೆಯನ್ನು ಬದಲಿಸಿದ ದೇಶದ ಮೊದಲ ರಾಜ್ಯ ಬಿಹಾರವಾಗಿದೆ.

ಈ ಹಿಂದೆ ಕೇವಲ ತುಷ್ಟೀಕರಣದ ರಾಜಕೀಯಕ್ಕಾಗಿ ಕಾಶ್ಮೀರಕ್ಕೆ ಆರ್ಟಿಕಲ್ 370 ಮೂಲಕ ವಿಶೇಷ ಸ್ಥಾನಮಾನ ನೀಡಿ ಪ್ರತ್ಯೇಕತಾವಾದಕ್ಕೆ, ಭಯೋತ್ಪಾದನೆಗೆ, ಅಶಾಂತಿಗೆ ಕಾಂಗ್ರೆಸ್ ಕಾರಣವಾಗಿತ್ತು. ಆ ಸಮಸ್ಯೆಯನ್ನು ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿಯವರೇ ಬರಬೇಕಾಯಿತು. ಈಗ ಬಿಹಾರದಲ್ಲಿ ತನ್ನ ಮೈತ್ರಿ ಕೂಟದ ಜೆಡಿಯು ಪಕ್ಷದ ಮೂಲಕ ಅಂತಹದೇ ಸಮಸ್ಯೆಯನ್ನು ಸೃಷ್ಟಿಸಿ ಭವಿಷ್ಯದಲ್ಲಿ ದೇಶದೊಳಗೆ ಮತ್ತೆ ಅಶಾಂತಿ, ಅಭದ್ರತೆ ಉಂಟುಮಾಡುತ್ತಿದೆ. ಆ ಮೂಲಕ ಹಂತ ಹಂತವಾಗಿ ಬಿಹಾರದ ಇಸ್ಲಾಮೀಕರಣಕ್ಕೂ ಕಾಂಗ್ರೆಸ್ ನೇತೃತ್ವದ I.N.D.I.A ಮೈತ್ರಿಕೂಟದ ಜೆಡಿಯು ತಯಾರಿ ನಡೆಸಿದ್ದು ಒಟ್ಟಾರೆಯಾಗಿ ಕಾಂಗ್ರೆಸ್ಸಿನ ಜಿಹಾದಿ ಮನಸ್ಥಿತಿಯನ್ನು ತೋರಿಸುತ್ತಿದೆ.

ಈಗಲೇ ಇದನ್ನು ವಿರೋಧಿಸದಿದ್ದರೆ ಕಾಂಗ್ರೆಸ್‌ ಪಕ್ಷ ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಇಂತಹದೇ ನಿಯಮಗಳನ್ನು ಜಾರಿಗೆ ತಂದರೂ ಅಚ್ಚರಿಯಿಲ್ಲ. ಇಡೀ ದೇಶದ ಯಾವ ರಾಜ್ಯದಲ್ಲಿಯೂ ಇಲ್ಲದಂತಹ ನಿರ್ಧಾರವನ್ನು ಬಿಹಾರದಲ್ಲಿ ಮಾತ್ರ ತಳೆಯಲು ಮೊಘಲ್‌ ಕಾಲದ ಮನಸ್ಥಿತಿಯವರಿಂದ ಮಾತ್ರ ಸಾಧ್ಯ ಎಂದು ಶಾಸಕರು ಗುಡುಗಿದರು.

Ramya Bolantoor

Recent Posts

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

3 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

18 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

40 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

57 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

1 hour ago