ಸುಳ್ಯ: ೨೦೨೧ -೨೨ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ಆಯ್ಕೆಯಾಗಿದೆ.
ಕರ್ನಾಟಕ ಸರಕಾರದಿಂದ ಪ್ರತಿ ತಾಲೂಕಿನ ಒಂದು ಗ್ರಾಮ ಪಂಚಾಯಿತಿಗೆ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರವು ೨೦೨೧ -೨೨ನೇ ಸಾಲಿಗೆ ಸಂಬಂಧಿಸಿದ ಹಾಗೆ ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ಆಯ್ಕೆಯಾಗಿದೆ.
ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಸಮಗ್ರ ಅಭಿವೃದ್ಧಿ ಮತ್ತು ಆರೋಗ್ಯಕರ ಆಡಳಿತದ ಅಂಶಗಳ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಸಮಗ್ರ ನಿರ್ವಹಣೆಯಲ್ಲಿ, ಬಾಣಂತಿಯರ ,ಮಕ್ಕಳ ಮತ್ತು ದುರ್ಬಲ ವರ್ಗದವರ, ರಕ್ಷಣೆಯಲ್ಲಿ ಲಸಿಕೆ ಮತ್ತು ಇತರ ಆರೋಗ್ಯ, ಚಟುವಟಿಕೆಗಳ ಕುರಿತು ಕೈಗೊಂಡ ಕ್ರಮಗಳು, ಗ್ರಾಮ ಪಂಚಾಯಿತಿನ ತೆರಿಗೆ ವಸೂಲಾತಿಯಲ್ಲಿ ಗಮನಾರ್ಹ ಬೆಳವಣಿಗೆ, ತೆರಿಗೆಯ ಆನೈನ್ ಪಾವತಿ, ಸೋಲಾರ್ ಅಳವಡಿಕೆ, ಘನ ತ್ಯಾಜ್ಯ ಘಟಕದ ನಿರ್ವಹಣೆ, ಅಮೃತ ಉದ್ಯಾನವನ ಸ್ಮಶಾನ ನಿರ್ಮಾಣದ ವಿಶೇಷ ಚಟುವಟಿಕೆಗಳು, ಉದ್ಯೋಗ ಖಾತ್ರಿ ಯೋಜನೆಯ ಯಶಸ್ವಿ ಅನುಷ್ಠಾನ, ಶಾಲೆಗಳು ಅಂಗನವಾಡಿಗಳ ಯಶಸ್ವಿ ನಿರ್ವಹಣೆ, ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಗಳು ಮತ್ತು ಇತರ ಸಮಿತಿ ಸಭೆಗಳ ಅನುಷ್ಠಾನ,ಸಕಾಲದಲ್ಲಿ ಗ್ರಾಮ ಪಂಚಾಯತಿ ಸೇವೆಗಳ ನಿರ್ವಹಣೆ,ಬೀದಿ ದೀಪಗಳು ಕುಡಿಯುವ ನೀರು ಮತ್ತು ಸರಕಾರದ ೧೫ನೇ ಹಣಕಾಸು ವಸತಿ ಯೋಜನೆಗಳ ಯಶಸ್ವಿ ಅನುಷ್ಠಾನ, ಗ್ರಾಮ ಪಂಚಾಯತಿಯ ಸಾರ್ವಜನಿಕರ ಸಹಭಾಗಿತ್ವದಲ್ಲಿ ಕೈಗೊಳ್ಳುವ ವಿವಿಧ ಸ್ವಚ್ಛತಾ ಕಾರ್ಯಕ್ರಮಗಳನ್ನು ಪರಿಗಣಿಸಿ, ಅರಂತೋಡು ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಲಾಗಿದೆ.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…