ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉದ್ಯಮಿ, ಧಾರ್ಮಿಕ ಮುಂದಾಳು ಕೋಡಿಂಬಾಡಿ ಅಶೋಕ್ ರೈ ಅವರ ಹೆಸರು ಫೈನಲ್ ಆಗಿದೆ. ಈ ನಿಟ್ಟಿನಲ್ಲಿ ಅಧಿಕೃತ ಘೋಷಣೆ ಮಾತ್ರ ಬಾಕಿಯಿದ್ದು, ಎರಡು ದಿನದೊಳಗೆ ಅಭ್ಯರ್ಥಿಯನ್ನಾಗಿ ಘೋಷಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತು ಅಶೋಕ್ ಟಿಕೇಟ್ ರೇಸ್ನಲ್ಲಿ ಮುಂಚೂಣಿಯಲ್ಲಿದ್ದರು. ಕೊನೆಯ ಹಂತದಲ್ಲಿ ಟಿಕೇಟ್ ಅಶೋಕ್ ರೈ ಪಾಲಾಗಿದೆ. ಪುತ್ತೂರು ಬಿಜೆಪಿಯಿಂದ ಟಿಕೇಟ್ ಆಕಾಂಕ್ಷಿಯಾಗಿದ್ದ ಕೋಡಿಂಬಾಡಿ ಅಶೋಕ್ ರೈ ಬಿಜೆಪಿಯಲ್ಲಿ ಅವಕಾಶ ವಂಚಿತರಾದ ಕಾರಣ ಕಳೆದ ಕೆಲ ಸಮಯದ ಹಿಂದೆ ಕಾಂಗ್ರೆಸ್ ಸೇರಿದ್ದರು.