ಬಂಟ್ವಾಳ : ಬಂಟ್ವಾಳ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ತಾಲೂಕಿನ ಬಿ.ಸಿರೋಡು ಸಮೀಪದ ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯಲ್ಲಿ ಮಸ್ಟರಿಂಗ್ ಕಾರ್ಯ ನಡೆಯಿತು.
ತಾಲೂಕು ಚುನಾವಣಾಧಿಕಾರಿ ಅಭಿದ್ ಗದ್ಯಾಲ್ ಮಾರ್ಗದರ್ಶನದಲ್ಲಿ ವಿವಿಧ ಅಧಿಕಾರಿಗಳು ಎಲ್ಲಾಹಂತದ ಮತಗಟ್ಟೆ ಅಧಿಕಾರಿಗಳಿಗೆ ಅಂತಿಮಹಂತದ ಮಾಹಿತಿ ನೀಡಿದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಸ್ಥಳಕ್ಕೆಬಂದುಸಿದ್ಧತಾ ಕಾರ್ಯಗಳಕುರಿತು ಅಧಿಕಾರಿಗಳ ಬಳಿ ಮಾಹಿತಿ ಪಡೆದುಕೊಂಡರು.
ಮತಗಟ್ಟೆ ಅಧಿಕಾರಿಗಳ ಜೊತೆ ಸಂವಾದ ನಡೆಸಿದ ಅವರು, ಮತಗಟ್ಟೆಗಳಲ್ಲಿ ಸಂಯಮದಿಂದ ವರ್ತಿಸಿ, ಚುನಾವಣೆ ಯಶಸ್ವಿಯಾಗಲು ಸಹಕರಿಸಿ ಎಂದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಸ್ಟರಿಂಗ್ ಕಾರ್ಯ ನಡೆಯುತ್ತಿದ್ದು ಎಲ್ಲಾ ಸಿಬ್ಬಂದಿಗಳು ಮಧ್ಯಾಹ್ನದ ಬಳಿಕ ನಿಯೋಜಿಸಲ್ಪಟ್ಟ ಮತಗಟ್ಟೆಗಳಿಗೆ ತೆರಳಲಿದ್ದಾರೆ. ಚುನಾವಣೆ ಸುಸೂತ್ರವಾಗಿ ನಡೆಯಲು ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ ಎಂದವರು ವಿವರ ನೀಡಿದರು. ಉಪತಹಶೀಲ್ದಾರ್ ನವೀನ್ ಬೆಂಜನಪದವು ಉಪಸ್ಥಿತರಿದ್ದರು.