ಮಂಗಳೂರು: ಕಂಕನಾಡಿ ಗರೋಡಿ ಬಳಿ ಕಳೆದ ವರ್ಷ ನವೆಂಬರ್ ೧೯ರಂದು ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ನೂತನ ಆಟೋ ರಿಕ್ಷಾ ಮತ್ತು ಬಿಜೆಪಿ ವತಿಯಿಂದ ೫ ಲಕ್ಷ ರೂ. ಮೌಲ್ಯದ ಚೆಕ್ ಇಂದು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕುಕ್ಕರ್ ಬಾಂಬ್ ಸೋಟಿಸುವ ಮೂಲಕ ಭಾರತವನ್ನು ಇಸ್ಲಾಮಿಕ್ ರಾಷ್ಟ್ರ ಮಾಡುವ ಹುನ್ನಾರ ಈಗಾಗಲೇ ಬಯಲಾಗಿದೆ. ಎನ್ಐಎ ಅಧಿಕಾರಿಗಳೇ ಇದನ್ನು ಬಹಿರಂಗ ಪಡಿಸಿದ್ದಾರೆ. ಸ್ಫೋಟ ಮಾಡಿದವರನ್ನು ಅಮಾಯಕರು ಎಂದು ಹೇಳಿದ್ದ ಕಾಂಗ್ರೆಸಿಗರು ಈಗ ಏನು ಹೇಳುತ್ತಾರೆ ಎಂದರು.
ಈ ವೇಳೆ ಶಾಸಕ ವೇದವ್ಯಾಸ ಕಾಮತ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಸಂದೀಪ್ ಗರೋಡಿ, ಸುಧೀರ್ ಶೆಟ್ಟಿ, ಶರಣ್ ಪಂಪ್ವೆಲ್ ಮೊದಲಾದವರು ಉಪಸ್ಥಿತರಿದ್ದರು.