ಪುತ್ತೂರು: ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆ ರಂಗು ಜೋರಾಗಿದೆ. ಆಶಾ ತಿಮ್ಮಪ್ಪ ಮತ್ತೊಂದು ಕಡೆ ಅಶೋಕ್ ರೈ ಹಾಗೂ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ನಡುವೆ ತ್ರಿಕೋನ ಸ್ಪರ್ಧೆ ಇದೆ. ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಬ್ಯಾಟ್ ಚಿಹ್ನೆ ಮೂಲಕ ಕಣಕ್ಕೆ ಇಳಿಯಲಿದ್ದಾರೆ.
ಅಲ್ಲದೆ ಬಿಜೆಪಿ ಅಭ್ಯರ್ಥಿಗೆ ಸರಿಯಾದ ಏಟು ನೀಡಲು ಪುತ್ತಿಲ ಪವರ್ಫುಲ್ ತಂತ್ರ ಹೂಡಿದ್ದು, ಏ. 28 ರಂದು ಸಾವಿರಕ್ಕೂ ಅಧಿಕ ಮಹಿಳೆಯರ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದಾರೆ. ಪುತ್ತಿಲ ನಾಮಪತ್ರ ಸಲ್ಲಿಕೆಗೆ ಮುಂಚಿತವಾಗಿಯೇ ಏ.23ರಂದೇ ಮಾಜಿ ಸಿಎಂ ಯಡಿಯೂರಪ್ಪ ಅವರು ಪುತ್ತಿಲ ಅವರಿಗೆ ಕರೆ ಮಾಡಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಕೇಳಿಕೊಂಡಿದ್ದರು. ಆದರೆ ಪುತ್ತಿಲ ಅದಕ್ಕೆ ಸೊಪ್ಪು ಹಾಕಿಲ್ಲ.
ಅಲ್ಲದೆ ಬಿಜೆಪಿಗೆ ಸರಿಯಾದ ಉತ್ತರ ನೀಡಬೇಕೆಂಬ ಉದ್ದೇಶದಿಂದ ಸಮರ್ಪಕ ಪೂರ್ವತಯಾರಿ ನಡೆಸಿದ್ದು, ಸಹಸ್ರಾರು ಜನರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದರು. ಇದೀಗ ಏ.28ರಂದು ಮಹಿಳಾ ಸಮಾವೇಶಕ್ಕೆ ಮುಂದಾಗಿದ್ದು, ಬಿಜೆಪಿ ಪಾಳಯದಲ್ಲಿ ನಡುಕ ಹುಟ್ಟಿಸಿದೆ.