Categories: ಮಂಗಳೂರು

ವಿಷ ವಿಕ್ಕಿ ಶ್ವಾನಗಳ ಹತ್ಯೆ, ಹಸು ಬಲಿ: ಆರೋಪಿಯ ಬಂಧನಕ್ಕೆ ಬಜರಂಗದಳ ಆಗ್ರಹ

ಉಳ್ಳಾಲ: ದುಷ್ಕರ್ಮಿಯೊಬ್ಬ ಆಹಾರದಲ್ಲಿ ವಿಷ ಬೆರೆಸಿ ಸುಮಾರು 25 ನಾಯಿಗಳ ಮಾರಣ ಹೋಮ ನಡೆಸಿದ್ದಾನೆ. ಇನ್ನು, ಅದೇ ವಿಷಾಹಾರವನ್ನ ತಿಂದ ಹಸು ಕೂಡಾ ಸಾವನ್ನಪ್ಪಿದ್ದು, ಕೃತ್ಯ ಎಸಗಿರುವ ದುರುಳನನ್ನು ಬಂಧಿಸುವಂತೆ ಬಜರಂಗದಳ ಆಗ್ರಹಿಸಿದೆ.

ತಲಪಾಡಿಯ ಅಲಂಕಾರಗುಡ್ಡೆ, ಭಂಡಾರಮನೆ ಬಳಿ ನಿವಾಸಿ ಅಮಿತ್ ಎಂಬುವರ ಹಸು ಸಾವನ್ನಪ್ಪಿದೆ. ಸ್ಥಳೀಯ ನಿವಾಸಿ ಖಾದರ್ ಎಂಬಾತ ಕೃತ್ಯ ನಡೆಸಿದ್ದಾನೆಂದು ಅಮಿತ ಆರೋಪಿಸಿದ್ದಾರೆ. ಖಾದರ್ ಮೇಕೆಗಳನ್ನ ಸಾಕುತ್ತಿದ್ದು ಇತ್ತೀಚಿಗೆ ಆತನ ಮೇಕೆ ಮೇಲೆ ನಾಯಿಗಳು ದಾಳಿ ನಡೆಸಿ ಕೊಂದಿದ್ದವು. ಇದರಿಂದ ರೊಚ್ಚಿಗೆದ್ದ ಖಾದರ್ ಸುತ್ತಮುತ್ತಲ ಬೀದಿ ಮತ್ತು ಸಾಕು ನಾಯಿಗಳಿಗೆ ವಿಷಾಹಾರ ಉನಿಸಿ ಸುಮಾರು 25 ರಷ್ಟು ನಾಯಿಗಳ ಕೊಂದಿದ್ದಾನೆ.

ಅಲ್ಲದೇ, ನಾಯಿಗಳಿಗೆ ವಿಷಪ್ರಾಷಣ ಮಾಡಿದ ಬಗ್ಗೆ ಖಾದರ್ ಬಹಿರಂಗವಾಗಿ ಜನರಲ್ಲಿ ಹೇಳಿದ್ದಾಗಿ ಅಮಿತ್ ಆರೋಪಿಸಿದ್ದಾರೆ. ಇಂದು ಕೂಡ ನಾಯಿಗಳು ವಿಷಾಹಾರ ಸೇವಿಸಿ ವಿಲ ವಿಲ ಒದ್ದಾಡುತ್ತಿರುವ ದೃಶ್ಯ ಮಾಧ್ಯಮದ ಕ್ಯಾಮೆರಾಕ್ಕೆ ಸಿಕ್ಕಿವೆ. ಅಮಿತ್ ಅವರ ಹಸು ಹುಲ್ಲು ಮೇಯಲು ಹೋಗಿ ಮನೆ ಪಕ್ಕದ ದೇವಸ್ಥಾನದ ಬಳಿ ಅಕಾಲಿಕವಾಗಿ ಸಾವನ್ನಪ್ಪಿದೆ. ಪರಿಶೀಲನೆ ನಡೆಸಿದ ಪಶು ವೈದ್ಯರು ಹಸು ವಿಷಾಹಾರ ಸೇವಿಸಿ ಸತ್ತಿರುವುದಾಗಿ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಬಜರಂಗದಳ ಉಳ್ಳಾಲ ನಗರ ಪ್ರಖಂಡ ಸಂಯೋಜಕ ಅರ್ಜುನ್ ಮಾಡೂರು ಭೇಟಿ ನೀಡಿದ್ದು, ಮೃತಪಟ್ಟ ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿ ಕೃತ್ಯ ಎಸಗಿದ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ತಲಪಾಡಿ ಗ್ರಾ.ಪಂ ಪಿಡಿಒ ಮತ್ತು ಉಳ್ಳಾಲ ಪೊಲೀಸ್ ಠಾಣೆಯ ಠಾಣಾಧಿಕಾರಿಯಲ್ಲಿ ಆಗ್ರಹಿಸಿದ್ದಾರೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago