ಬೆಳ್ತಂಗಡಿ: ತಾಲೂಕು ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಬಳಂಜ ಗ್ರಾ.ಪಂ ಸಭಾ ಭವನದಲ್ಲಿ ಅ.15 ರಂದು ನಡೆಯಿತು.
ಕಾರ್ಯಕ್ರದ ಉದ್ಘಾಟನೆಯನ್ನು ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಮ್ ನೇರವೇರಿಸಿ ಶುಭಕೋರಿದರು. ಅಧ್ಯಕ್ಷತೆಯನ್ನು ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್ ವಹಿಸಿದ್ದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಣಾಧಿಕಾರಿ ಕುಸುಮಾಧರ್, ಎಪಿಎಂಸಿ ಕಾರ್ಯದರ್ಶಿ ರವೀಂದ್ರ, ಕೃಷಿ ಇಲಾಖಾ ಅಧಿಕಾರಿ ಚಿದಾನಂದ ಹೂಗರ್,ಬಳಂಜ ಗ್ರಾ.ಪಂ ಉಪಾಧ್ಯಕ್ಷೆ ಬೇಬಿ ನಾರಾಯಣ,ತೋಟಗಾರಿಕಾ ಇಲಾಖ ಅಧಿಕಾರಿ ಭೀಮರಾವ್,ಅಕ್ಷರದಾಸೋಹ ಯೋಜನೇಯ ಅಧಿಕಾರಿ ತಾರಕೇಸರಿ, ಉಪ ತಹಶೀಲ್ದಾರ್ ಮಲ್ಲಪ್ಪ ನಡುಗಡ್ಡಿ,ಸಹಕಾರಿ ಅಭಿವೃದ್ದಿ ಅಧಿಕಾರಿ ಪ್ರತಿಮಾ,ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ನಾಗವೇಣಿ, ಆಹಾರ ಇಲಾಖೆಯ ವಿಶ್ವ,ಸರ್ವೆ ಇಲಾಖೆಯ ಹುಂಡೇಕಾರ್, ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ತಮ್ಮಣ್ಣ ಗೌಡ ಪಾಟೀಲ್ ಹಾಗೂ ವಿವಿಧ ಇಲಾಖೆಯ ಇಲಾಖಾಧಿಕಾರಿಗಳು, ಗ್ರಾ.ಪಂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂ.ಅ.ಅಧಿಕಾರಿ ಶ್ರೀನಿವಾಸ್ ಸ್ವಾಗತಿಸಿ, ಗ್ರಾಮಕರೀಣಿಕ ಸಂತೋಷ್ ಗೌಡ ಪ್ರಾಸ್ತವಿಕ ಮಾತನಾಡಿ, ಚಂದ್ರಹಾಸ್ ಬಳಂಜ ನಿರೂಪಿಸಿದರು.